‘ಈ ಚಿತ್ರಕಲಾ ಶಿಬಿರ ಜನರಿಗೆ ಗೊತ್ತಿಲ್ಲದ ಬಹುತೇಕ ಸ್ಮಾರಕಗಳು ಮತ್ತು ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಕಲಾಕೃತಿಗಳನ್ನು ಪರಿಚಯಿಸಲು ಉತ್ತಮ ವೇದಿಕೆಯಾಗಿದೆ. ಪ್ರತಿ ಕಲಾವಿದರೂ ಈವರೆಗೆ ಕತ್ತಲಲ್ಲಿ ಮುಳುಗಿದ್ದ ಜಿಲ್ಲೆಯ ಬಹುತೇಕ ವಿಶೇಷತೆಗಳನ್ನು ತಮ್ಮ ಕುಂಚದಲ್ಲಿ ಅರಳಿಸುವ ಮೂಲಕ ದೇಶ, ವಿದೇಶಗಳ ಪ್ರವಾಸಿಗರಿಗೆ ಪರಿಚಯಿಸುವ ಸಣ್ಣ ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಹೇಳಿದರು.