ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ: ಕಾಲುವೆಗೆ ಹಾರಿ ರೈತ ಆತ್ಮಹತ್ಯೆ

Last Updated 14 ಅಕ್ಟೋಬರ್ 2019, 16:00 IST
ಅಕ್ಷರ ಗಾತ್ರ

ಸಿಂದಗಿ: ತಾಲ್ಲೂಕಿನ ಮೋರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈತನೊಬ್ಬ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಸೋಮವಾರ ತಿಳಿದುಬಂದಿದೆ.

ಹಂಚಿನಾಳ ಗ್ರಾಮದ ನಿಂಗಪ್ಪ ಸಿದ್ದಪ್ಪ ದುದ್ದಗಿ (49) ಆತ್ಮಹತ್ಯೆ ಮಾಡಿಕೊಂಡ ರೈತ. ಅ.12ರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

‘ಮೋರಟಗಿಯ ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯಲ್ಲಿ ಅವರು ₹ 6ಲಕ್ಷ ಮತ್ತು ಗಬಸಾವಳಗಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ ₹ 1ಲಕ್ಷ ಸಾಲ ಪಡೆದಿದ್ದರು. 2–3 ವರ್ಷಗಳಿಂದ ಸರಿಯಾಗಿ ಮಳೆಯಾಗದ ಕಾರಣ ಫಸಲು ಕೈಗೆ ಬಂದಿರಲಿಲ್ಲ. ಇದರಿಂದಾಗಿ ಸಾಲ ತೀರಿಸಲಾಗದೇ ಬಡ್ಡಿ ಹೆಚ್ಚುತ್ತಲೇ ಸಾಗಿತ್ತು. ಹೀಗಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೋರಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT