ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಗ್ಗಡೆನಗರದ ಸಮುದಾಯ ಭವನ ಲೋಕಾರ್ಪಣೆ

Last Updated 3 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಟರಾಯನಪುರದ ಹೆಗ್ಗಡೆನಗರದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ₹1.35 ಕೋಟಿ ವೆಚ್ಚದ ಸಮುದಾಯ ಭವನವನ್ನು ಕೃಷಿ ಸಚಿವ ಕೃಷ್ಣಬೈರೇಗೌಡ ಶನಿವಾರ ಉದ್ಘಾಟಿಸಿದರು.

ಹೆಗ್ಗಡೆನಗರ ಸುತ್ತಮುತ್ತಲ ಬಡಾವಣೆಗಳಲ್ಲಿ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಜನರು ಹೆಚ್ಚಾಗಿ ವಾಸವಿದ್ದಾರೆ. ಅವರಿಗೆ ಅನುಕೂಲವಾಗಲೆಂದು ಈ ಭವನ ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಭವನದ ಉಸ್ತುವಾರಿಯನ್ನು ಬಿಬಿಎಂಪಿಯೇ ನೋಡಿಕೊಳ್ಳುತ್ತದೆ. ಕಡಿಮೆ ದರದಲ್ಲಿ ಭವನವನ್ನು ಬಾಡಿಗೆಗೆ ನೀಡಲಾಗುತ್ತದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆಯಬೇಕು ಎಂದರು.

ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 20 ಕೊಳವೆ ಬಾವಿಗಳನ್ನು ಕೊರೆಸಿದರೂ ನೀರು ಸಿಕ್ಕಿಲ್ಲ. ಹೀಗಾಗಿ, ಕಾವೇರಿ ನೀರನ್ನು ಪೂರೈಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅದು ಪೂರ್ಣಗೊಂಡರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT