‘ವಿಜಯಪುರ ತೋಟಗಾರಿಕೆ ಜಿಲ್ಲೆಯಾಗಿದ್ದು, ಸುಮಾರು ಒಂದು ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶವನ್ನು ಹೊಂದಿದೆ. ದ್ರಾಕ್ಷಿ, ನಿಂಬೆ, ದಾಳಿಂಬೆ, ಬಾಳೆ ಮತ್ತು ತರಕಾರಿಯನ್ನು ಬೆಳೆಯಲಾಗುತ್ತಿದೆ. ಇದರಿಂದ ವಾರ್ಷಿಕ ನೂರಾರು ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ. ತಿಡಗುಂದಿಯಲ್ಲಿ ಈಗಾಗಲೇ ತೋಟಗಾರಿಕೆ ವಿಸ್ತರಣಾ, ಸಂಶೋಧನಾ ಘಟಕವಿದೆ. ಅಲ್ಲದೇ, ಎಲ್ಲ ಬೆಳೆಗಾರರಿಗೂ ತಿಡಗುಂದಿ ಸೂಕ್ತ ಸ್ಥಳವಾಗಿದೆ. ಅಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪಿಸುವುದನ್ನು ಬಿಟ್ಟು, ಆಲಮೇಲದಲ್ಲಿ ಸ್ಥಾಪಿಸುತ್ತಿರುವುದು ಸರಿಯಲ್ಲ’ ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ, ಉಪಾಧ್ಯಕ್ಷ ಡಾ.ಕೆ.ಎಚ್.ಮುಂಬಾರೆಡ್ಡಿ, ನಿರ್ದೇಶಕರಾದ ಪಿ.ಎಂ.ಗದ್ಯಾಳ, ಎಸ್.ಎಚ್.ನಾಡಗೌಡ ಹೇಳಿದ್ದಾರೆ.