ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರ‌ ನಡುವೆ ಹೊಡೆದಾಟ?

Last Updated 20 ಜನವರಿ 2019, 5:03 IST
ಅಕ್ಷರ ಗಾತ್ರ

ರಾಮನಗರ: ಬಿಡದಿಯ ಈಗಲ್‌ಟನ್ರೆಸಾರ್ಟ್‌ನಲ್ಲಿವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ನಡುವೆ ಶನಿವಾರ ತಡರಾತ್ರಿ ಹೊಡೆದಾಟ ನಡೆದಿದೆ ಎನ್ನಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದ ಸಿಂಗ್, ಭೀಮನಾಯ್ಕ ಹಾಗೂ ಜೆ.ಎನ್. ಗಣೇಶ್ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭ ಗಾಜಿನ‌ ಬಾಟಲಿಯಿಂದ ಆನಂದ ಸಿಂಗ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಮೂವರು ಶಾಸಕರು ಶನಿವಾರ ಸಂಜೆ ವಿಧಾನಸೌಧದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‌ನಡೆದ ಬಳ್ಳಾರಿ ಜಿಲ್ಲಾ ಮಿನರಲ್ ಫಂಡ್ ಕುರಿತ ಸಭೆಯಲ್ಲಿ ಪಾಲ್ಗೊಂಡು ರಾತ್ರಿ ರೆಸಾರ್ಟಿಗೆ ವಾಪಸ್ ಆಗಿದ್ದರು.ಹಲ್ಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಗಣಿ ವಿಷಯಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT