ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಿಗೇರಿ ನಾಗರಾಜ್ (33) ಮೃತಪಟ್ಟವರು. ಲಾರಿ ಚಾಲಕ ಮಹಾದೇವಪ್ಪ ಮತ್ತು ಬೈಕ್ನ ಹಿಂಬದಿ ಸವಾರ ಚಂದ್ರು ಗಾಯಗೊಂಡಿದ್ದಾರೆ. ಚಂದ್ರು ಅವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹರಪನಹಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಗುಡ್ಡದ ಇಳಿಜಾರಿನ ತಿರುವಿನಲ್ಲಿ ಪಲ್ಟಿಯಾಗಿದೆ. ಆಗ ಡೀಸೆಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಟ್ಯಾಂಕರ್ ಹಿಂದೆ ಬರುತ್ತಿದ್ದ ನಾಗರಾಜ್ ಅವರಿಗೆ ಬೆಂಕಿ ತಗುಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.