ಹರೂರು ಗ್ರಾಮದ ದೊಡ್ಡ ಕೆರೆಯಲ್ಲಿ 15 ದಿನಗಳಿಂದ ಮೀನುಗಳು ಸಾಯುತ್ತಿವೆ. ಈ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು, ‘ಕೆರೆಯಲ್ಲಿ ಮೀನುಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಆಮ್ಲಜನಕದ ಕೊರತೆ ಉಂಟಾಗಿ ಸಾಯುತ್ತಿವೆ. ಮೀನುಗಳಿಗೆ ಯಾವುದೇ ರೋಗ ಬಂದು ಸಾಯುತ್ತಿಲ್ಲ’ ಎಂದು ದೃಢಪಡಿಸಿದ್ದಾರೆ. ಕೂಡಲೇ ಶಿಕಾರಿ ಮಾಡಿ ಮೀನುಗಳನ್ನು ತಿನ್ನಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ ಕೊರೊನಾ ಸೋಂಕಿನ ಭೀತಿಯಿಂದ ಗ್ರಾಮಸ್ಥರು ಕೆರೆಯಲ್ಲಿಯ ಮೀನುಗಳನ್ನು ಶಿಕಾರಿ ಮಾಡಲು ಹಿಂದೇಟು ಹಾಕಿದ್ದಾರೆ.