<p><strong>ಬೆಂಗಳೂರು</strong>: ಪ್ರತಿ ಹಳ್ಳಿಯಲ್ಲೂ ಪುರುಷ ಸ್ವಸಹಾಯ ಸಂಘ ತೆರೆಯಲು ₹500 ಕೋಟಿ ಮೀಸಲಿಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು.</p>.<p>ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೇಶಕರ ಕಾರ್ಯಾಲಯ ಹಾಗೂ ಕ್ಷೇತ್ರೀಯ ನಿರ್ದೇಶಕರ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ 29 ಸಾವಿರ ಹಳ್ಳಿಗಳಿದ್ದು, ಎಲ್ಲೆಡೆಯೂ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಪುರುಷ ಸ್ವಸಹಾಯ ಸಂಘಗಳನ್ನು ರಚಿಸುವ ಉದ್ದೇಶ ಇದೆ. ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್), ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯುವ ಜನರಿಗೆ ವೃತ್ತಿ ತರಬೇತಿ ನೀಡಿ ಅವರ ಕೌಶಲ ಹೆಚ್ಚಿಸುವುದು ಇದರ ಉದ್ದೇಶ ಎಂದರು.</p>.<p>ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಯುವಜನ ಅಧಿಕಾರಿಗಳಿದ್ದು, ತಾಲ್ಲೂಕು ಮಟ್ಟದಲ್ಲೂ ಆಪ್ತ ಸಮಾಲೋಚಕರನ್ನು<br />ನಿಯೋಜಿಸಿಕೊಳ್ಳಲಾಗುತ್ತಿದೆ. 28 ತಾಲ್ಲೂಕುಗಳಲ್ಲಿ ಈ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಪಿ.ಮುಲಾಯ್ ಮಹಿಲನ್, ನೆಹರು ಯುವ ಕೇಂದ್ರ ಸಂಘಟನೆ ಕ್ಷೇತ್ರೀಯ ನಿರ್ದೇಶಕ ಎಂ.ಎನ್.ನಟರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರತಿ ಹಳ್ಳಿಯಲ್ಲೂ ಪುರುಷ ಸ್ವಸಹಾಯ ಸಂಘ ತೆರೆಯಲು ₹500 ಕೋಟಿ ಮೀಸಲಿಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು.</p>.<p>ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೇಶಕರ ಕಾರ್ಯಾಲಯ ಹಾಗೂ ಕ್ಷೇತ್ರೀಯ ನಿರ್ದೇಶಕರ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ 29 ಸಾವಿರ ಹಳ್ಳಿಗಳಿದ್ದು, ಎಲ್ಲೆಡೆಯೂ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಪುರುಷ ಸ್ವಸಹಾಯ ಸಂಘಗಳನ್ನು ರಚಿಸುವ ಉದ್ದೇಶ ಇದೆ. ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್), ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯುವ ಜನರಿಗೆ ವೃತ್ತಿ ತರಬೇತಿ ನೀಡಿ ಅವರ ಕೌಶಲ ಹೆಚ್ಚಿಸುವುದು ಇದರ ಉದ್ದೇಶ ಎಂದರು.</p>.<p>ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಯುವಜನ ಅಧಿಕಾರಿಗಳಿದ್ದು, ತಾಲ್ಲೂಕು ಮಟ್ಟದಲ್ಲೂ ಆಪ್ತ ಸಮಾಲೋಚಕರನ್ನು<br />ನಿಯೋಜಿಸಿಕೊಳ್ಳಲಾಗುತ್ತಿದೆ. 28 ತಾಲ್ಲೂಕುಗಳಲ್ಲಿ ಈ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಪಿ.ಮುಲಾಯ್ ಮಹಿಲನ್, ನೆಹರು ಯುವ ಕೇಂದ್ರ ಸಂಘಟನೆ ಕ್ಷೇತ್ರೀಯ ನಿರ್ದೇಶಕ ಎಂ.ಎನ್.ನಟರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>