ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ತಾಲ್ಲೂಕಿನಲ್ಲಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಹರಿಯುತ್ತಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮತ್ತು ತಾಲ್ಲೂಕಿನ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮರೆಯಾಗುವ ಮುನ್ಸೂಚನೆ ಇದೆ. ಇದರಿಂದ ಪ್ರವಾಹ ಎದುರಾಗಲಿದ್ದು, ಜನ- ಜಾನುವಾರುಗಳ ಸುರಕ್ಷತೆಗಾಗಿ ಸೂಕ್ತ ಸಿದ್ಧತೆ ಕೈಗೊಳ್ಳಲಾಗಿದೆ.
ಈಗಾಗಲೇ 16 ದೋಣಿಗಳನ್ನು ಸುಸ್ಥಿತಿಯಲ್ಲಿ ಇಡಲಾಗಿದೆ. ಎನ್.ಡಿ.ಆರ್.ಎಫ್ ನ 40 ಜನ ಸಿಬ್ಬಂದಿ ತಾಲ್ಲೂಕಿನಲ್ಲಿ ಬೀಡು ಬಿಟ್ಟಿದ್ದು, ಸಂಭವನೀಯ ಪ್ರವಾಹದ ಸಮೀಕ್ಷೆ ನಡೆಸುತ್ತಿದೆ.
ಶಾಲೆ, ಕಾಲೇಜುಗಳಲ್ಲಿ ಅಣಕು ಪ್ರದರ್ಶನ ನೀಡಿ, ಪ್ರವಾಹದಿಂದ ಪಾರಾಗುವ ಕುರಿತು ಜಾಗೃತಿ ಮೂಡಿಸುತ್ತಿದೆ.
ತಾಲ್ಲೂಕು ಆಡಳಿತ ಕಾಳಜಿ ಕೇಂದ್ರಗಳನ್ನು ಗುರುತಿಸಿದೆ.
ನೋನಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ಸಭೆ ನಡೆಸಲಾಗಿದ್ದು ನದಿಗಳ