ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಜನ್ಮದಿನ ಸರಳ ಆಚರಣೆ

Last Updated 13 ಜನವರಿ 2020, 14:18 IST
ಅಕ್ಷರ ಗಾತ್ರ

ಶಿವಮೊಗ್ಗ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಮಾಯಾವತಿಅವರ 64ನೇ ಜನ್ಮ ದಿನವನ್ನು ಜನವರಿ 15ರಂದುಸರಳವಾಗಿಆಚರಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ ಹೇಳಿದರು.

ಮಾಯಾವತಿಗೆಪ್ರಧಾನಿಯಾಗುವ ಅರ್ಹತೆಇದೆ. ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಧರ್ಮಗಳನ್ನು ಸಮಾನವಾಗಿ ಕಂಡಿದ್ದಾರೆ. ಸರ್ವರಿಗೂ ಸಮಪಾಲು ಎಂಬ ತತ್ವದಆಧಾರದಲ್ಲಿ ಕೆಲಸ ಮಾಡಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಂಗ್ರೆಸ್‌,ಬಿಜೆಪಿ ಯಾವತ್ತು ಜನಪರವಾಗಿಲ್ಲ. ಕಾಂಗ್ರೆಸ್ ಕೇವಲ ಭ್ರಮೆಗಳನ್ನು ಹುಟ್ಟಿಸಿತು. ಪರಿಶಿಷ್ಟರಿಗೆ ಯಾವ ನ್ಯಾಯವೂ ಸಿಗಲಿಲ್ಲ. ಬಿಜೆಪಿ ನ್ಯಾಯವನ್ನೇ ಕಸಿದುಕೊಂಡಿತು. ಮನು ಧರ್ಮ ಸಿದ್ಧಾಂತಕ್ಕೆಮರುಳಾಗಿ ಮಾನವ ಧರ್ಮವನ್ನೇ ಮರೆತುಬಿಟ್ಟಿತು. ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡಿದೆಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಮುಖಂಡರಾದ ಜಿ.ಸಂಗಪ್ಪ, ಎಚ್.ಎನ್.ಶ್ರೀನಿವಾಸ್, ಲಕ್ಷ್ಮೀಪತಿ, ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT