ಈ ವಿವಾದಿತ ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಆಗಿದ್ದ ತೀರ್ಮಾನ ಉಲ್ಲಂಘಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ರೈತರ ಬಗರ್ ಹುಕುಂ ಭೂಮಿಯಲ್ಲಿ ಅಕ್ರಮವಾಗಿ ಕಂದಕ ತೆಗೆಯಲು ಪ್ರಾರಂಭಿಸಿದ್ದರು. ಇದನ್ನು ವಿರೋಧಿಸಿ ಸುತ್ತಮುತ್ತಲಿನ ರೈತರು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡನಂಜಯ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಈ ಕಾರ್ಯವೈಖರಿಯನ್ನು ಪ್ರಶ್ನಿಸಿದರು.