<p><strong>ಗದಗ</strong>: ನಗರದ ಡಾ. ವಿ.ಬಿ. ಹಿರೇಮಠ ಮೆಮೊರಿಯಲ್ ಪ್ರತಿಷ್ಠಾನ ಹಾಗೂ ಅಶ್ವಿನಿ ಪ್ರಕಾಶನದ ವತಿಯಿಂದ ಪಂಡಿತ್ ಪುಟ್ಟರಾಜ ಗವಾಯಿಗಳವರ 111ನೇ ಜಯಂತ್ಯುತ್ಸವದ ನಿಮಿತ್ತ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಕವಿಗೋಷ್ಠಿ ಮತ್ತು ಶ್ರೀಗಳಿಗೆ ತುಲಾಭಾರ ಕಾರ್ಯಕ್ರಮ ಮಾರ್ಚ್ 3ರಂದು ನಡೆಯಲಿದೆ. </p>.<p>ಕಳಸಾಪುರ ರಸ್ತೆಯ ಸಾಯಿ ಜ್ಞಾನಯೋಗಾಶ್ರಮ ಎದುರಿಗೆ ಇರುವ ರಾಜಲಕ್ಷ್ಮಿ ನಿಲಯದಲ್ಲಿ ಕಾರ್ಯಕ್ರಮ ನಡೆಯಲಿದೆ. ನರಸಾಪುರ ಗದಗ-ಬೆಟಗೇರಿ ಅನ್ನದಾನೇಶ್ವರ ಸಂಸ್ಥಾನ ಶಾಖಾಮಠದ ವೀರೇಶ್ವರ ಶಿವಯೋಗಿಗಳು ಸಾನ್ನಿಧ್ಯ ವಹಿಸುವರು. ಪಂಡಿತ್ ರಾಜಗುರು ಗುರುಸ್ವಾಮಿ ಕಲಕೇರಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರತಿಷ್ಠಾನದ ಅಧ್ಯಕ್ಷೆ ವಿ.ವಿ. ಹಿರೇಮಠ ಅಧ್ಯಕ್ಷತೆ ವಹಿಸುವರು.</p>.<p>ಮಲ್ಲಿಕಾರ್ಜುನ ಗದಿಗಯ್ಯಾ, ಭೃಂಗಿಮಠ ದಂಡೋತಿ, ಶರಣಬಸವ ಎನ್. ವೆಂಕಟಾಪುರ, ಡಾ. ರಶ್ಮಿ ಅಂಗಡಿ, ವೀರಯ್ಯ ಹೊಸಮಠ, ನಾರಾಯಣ ವೀರಪ್ಪ ಹಿರೇಕೊಳಚಿ, ಮಹೇಶ ವಡ್ಡಿನ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರಾದ ಪುಟ್ಟರಾಜ ಹಿರೇಮಠ, ಸುಷ್ಮಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ನಗರದ ಡಾ. ವಿ.ಬಿ. ಹಿರೇಮಠ ಮೆಮೊರಿಯಲ್ ಪ್ರತಿಷ್ಠಾನ ಹಾಗೂ ಅಶ್ವಿನಿ ಪ್ರಕಾಶನದ ವತಿಯಿಂದ ಪಂಡಿತ್ ಪುಟ್ಟರಾಜ ಗವಾಯಿಗಳವರ 111ನೇ ಜಯಂತ್ಯುತ್ಸವದ ನಿಮಿತ್ತ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಕವಿಗೋಷ್ಠಿ ಮತ್ತು ಶ್ರೀಗಳಿಗೆ ತುಲಾಭಾರ ಕಾರ್ಯಕ್ರಮ ಮಾರ್ಚ್ 3ರಂದು ನಡೆಯಲಿದೆ. </p>.<p>ಕಳಸಾಪುರ ರಸ್ತೆಯ ಸಾಯಿ ಜ್ಞಾನಯೋಗಾಶ್ರಮ ಎದುರಿಗೆ ಇರುವ ರಾಜಲಕ್ಷ್ಮಿ ನಿಲಯದಲ್ಲಿ ಕಾರ್ಯಕ್ರಮ ನಡೆಯಲಿದೆ. ನರಸಾಪುರ ಗದಗ-ಬೆಟಗೇರಿ ಅನ್ನದಾನೇಶ್ವರ ಸಂಸ್ಥಾನ ಶಾಖಾಮಠದ ವೀರೇಶ್ವರ ಶಿವಯೋಗಿಗಳು ಸಾನ್ನಿಧ್ಯ ವಹಿಸುವರು. ಪಂಡಿತ್ ರಾಜಗುರು ಗುರುಸ್ವಾಮಿ ಕಲಕೇರಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರತಿಷ್ಠಾನದ ಅಧ್ಯಕ್ಷೆ ವಿ.ವಿ. ಹಿರೇಮಠ ಅಧ್ಯಕ್ಷತೆ ವಹಿಸುವರು.</p>.<p>ಮಲ್ಲಿಕಾರ್ಜುನ ಗದಿಗಯ್ಯಾ, ಭೃಂಗಿಮಠ ದಂಡೋತಿ, ಶರಣಬಸವ ಎನ್. ವೆಂಕಟಾಪುರ, ಡಾ. ರಶ್ಮಿ ಅಂಗಡಿ, ವೀರಯ್ಯ ಹೊಸಮಠ, ನಾರಾಯಣ ವೀರಪ್ಪ ಹಿರೇಕೊಳಚಿ, ಮಹೇಶ ವಡ್ಡಿನ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರಾದ ಪುಟ್ಟರಾಜ ಹಿರೇಮಠ, ಸುಷ್ಮಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>