ಜಿಲ್ಲಾಕೇಂದ್ರಕ್ಕೆ ಮಾತ್ರ ಸೀಮಿತವಾಗಿದ್ದ ಕೊರೊನಾ ಪ್ರಕರಣ ಈಗ ತಾಲ್ಲೂಕುಗಳಿಗೂ ವಿಸ್ತರಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದೆಡೆ ಸೋಂಕಿತರ ಸಂಪರ್ಕದಿಂದ ಜನರಿಗೆ ಸೋಂಕು ಹರಡುತ್ತಿದ್ದರೆ, ಇನ್ನೊಂದೆಡೆ ಯಾವುದೇ ದೇಶೀಯ, ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸ ಇಲ್ಲದ, ಮನೆಯಲ್ಲೇ ಇರುವ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಕಳವಳಕ್ಕೆ ಕಾರಣವಾಗಿದೆ.