‘ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿಗೆ ಶನಿವಾರ ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲ್ಯೇಕರ್ ಭೇಟಿ ನೀಡಿದ್ದು, ನೀರು ಹಂಚಿಕೆ ಬಿಕ್ಕಟ್ಟು ನ್ಯಾಯ ಮಂಡಳಿ ಮುಂದೆಯೇ ಇತ್ಯರ್ಥಗೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ರಾಜ್ಯದ ನೀರಾವರಿ ಸಚಿವರು ಇದನ್ನು ನೋಡಿಕೊಂಡು ಸುಮ್ಮನಿರಬಾರದು. ಕೂಡಲೇ ಗೋವಾಕ್ಕೆ ಭೇಟಿ ನೀಡಿ, ಅಲ್ಲಿ ಮಹದಾಯಿ ನೀರು ಯಾವುದಕ್ಕೆ ಬಳಕೆಯಾಗುತ್ತಿದೆ ಎನ್ನುವುದನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಿ, ಫೆ. 22ರ ಒಳಗೆ ನ್ಯಾಯಮಂಡಳಿ ಮುಂದೆ ಸಲ್ಲಿಸಬೇಕು’ ಎಂದು ಶಂಕ್ರಣ್ಣ ಆಗ್ರಹಿಸಿದರು.