<p><strong>ಗದಗ: ‘</strong>ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ, ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಸೋಮವಾರ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಜಿಲ್ಲಾ ಘಟಕ, ಬಂಜಾರಾ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.</p>.<p>‘ಸಂವಿಧಾನದಲ್ಲಿ ಎಲ್ಲಿಯೂ ಒಳಮೀಸಲಾತಿ ಎಂಬ ಶಬ್ದ ಇಲ್ಲ. ಸದಾಶಿವ ಆಯೋಗವು ಒಳಮೀಸಲಾತಿ ಕಲ್ಪಿಸಿರುವುದು ತಪ್ಪು. ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು’ ಎಂದು ಬಂಜಾರಾ ಸಮುದಾಯದ ಅಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.</p>.<p>‘ಇದು ಯಾರ ವಿರುದ್ಧದ ಹೋರಾಟವಲ್ಲ. ಯಾರು ಸದಾಶಿವ ಆಯೋಗದ ವರದಿಯ ಪರವಾಗಿ ನಿಲ್ಲುವರೋ ಅವರ ವಿರುದ್ಧವಾಗಿ ನಮ್ಮ ಹೋರಾಟವಿದೆ’ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ವಿದ್ಯಾದರ ದೊಡ್ಡಮನಿ ಹೇಳಿದರು.</p>.<p>ಮೋಹನ ಭಜಂತ್ರಿ, ಪರಶುರಾಮ ಕಟ್ಟಿಮನಿ, ಸುರೇಶ ಕಟ್ಟಿಮನಿ, ಐ.ಎಫ್ ಬೆಟಗೇರಿ, ವೈ.ಜಿ.ಗಡಾದ, ಸೋಮಣ್ಣ ಲಮಾಣಿ, ಪರಮೇಶ ಲಮಾಣಿ, ಶಣ್ಮುಖ ಕಾರಬಾರ, ಗಿರೀಶ ಕಾರಬಾರಿ ಇದ್ದರು.ಜಿಲ್ಲೆಯ 50ಕ್ಕೂ ಹೆಚ್ಚು ತಾಂಡಾದಿಂದ ನೂರಾರು ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಪ್ರತಿಭಟನೆಯು ಮಹಾತ್ಮಾಗಾಂಧಿ ವೃತ್ತದಿಂದ ಆರಂಭವಾಗಿ ಮಹೇಂದ್ರಕರ ವೃತ್ತ, ಹುಯಿಲಗೋಳ ನಾರಾಯಣರಾವ ವೃತ್ತ, ಬಸವೇಶ್ವರ ವೃತ್ತ, ಕೆ.ಎಚ್.ಪಾಟೀಲ ವೃತ್ತ, ಭೂಮರಡ್ಡಿ ವೃತ್ತ, ಜನರಲ್ ಕಾರ್ಯಪ್ಪ ವೃತ್ತದ ಮಾರ್ಗವಾಗಿ ಕಾಟನ್ಸೇಲ್ ಸೊಸೈಟಿಗೆ ತೆರಳಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮನವಿ ಸಲ್ಲಿಸಿದರು.</p>.<p>ಭರವಸೆ: ಸಚಿವ ಎಚ್.ಕೆ.ಪಾಟೀಲ ಅವರು ಪ್ರತಿಭಟನಾ ನಿರತ ಮುಖಂಡರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿರುವುದರಿಂದ ನೇರವಾಗಿ ಮನವಿ ಸ್ವೀಕರಿಸಿಲು ಸಾಧ್ಯವಾಗುತ್ತಿಲ್ಲ, ಸರ್ಕಾರ ಏಕಪಕ್ಷಿಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಜ.3 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಮನವರಿಕೆ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>* * </p>.<p>ಸರ್ಕಾರ ದಲಿತರನ್ನು ಒಡೆದಾಳುವ ನೀತಿಯನ್ನು ಕೈಬಿಡಬೇಕು. ರಾಜಕೀಯ ಸ್ವಾರ್ಥಕ್ಕೆ ನಮ್ಮನ್ನು ಬಲಿಕೊಡಬೇಡಿ<br /> <strong>ಚಂದ್ರಕಾಂತ ಚವ್ಹಾಣ</strong><br /> ಬಂಜಾರಾ ಸಮುದಾಯದ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: ‘</strong>ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ, ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಸೋಮವಾರ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಜಿಲ್ಲಾ ಘಟಕ, ಬಂಜಾರಾ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.</p>.<p>‘ಸಂವಿಧಾನದಲ್ಲಿ ಎಲ್ಲಿಯೂ ಒಳಮೀಸಲಾತಿ ಎಂಬ ಶಬ್ದ ಇಲ್ಲ. ಸದಾಶಿವ ಆಯೋಗವು ಒಳಮೀಸಲಾತಿ ಕಲ್ಪಿಸಿರುವುದು ತಪ್ಪು. ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು’ ಎಂದು ಬಂಜಾರಾ ಸಮುದಾಯದ ಅಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.</p>.<p>‘ಇದು ಯಾರ ವಿರುದ್ಧದ ಹೋರಾಟವಲ್ಲ. ಯಾರು ಸದಾಶಿವ ಆಯೋಗದ ವರದಿಯ ಪರವಾಗಿ ನಿಲ್ಲುವರೋ ಅವರ ವಿರುದ್ಧವಾಗಿ ನಮ್ಮ ಹೋರಾಟವಿದೆ’ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ವಿದ್ಯಾದರ ದೊಡ್ಡಮನಿ ಹೇಳಿದರು.</p>.<p>ಮೋಹನ ಭಜಂತ್ರಿ, ಪರಶುರಾಮ ಕಟ್ಟಿಮನಿ, ಸುರೇಶ ಕಟ್ಟಿಮನಿ, ಐ.ಎಫ್ ಬೆಟಗೇರಿ, ವೈ.ಜಿ.ಗಡಾದ, ಸೋಮಣ್ಣ ಲಮಾಣಿ, ಪರಮೇಶ ಲಮಾಣಿ, ಶಣ್ಮುಖ ಕಾರಬಾರ, ಗಿರೀಶ ಕಾರಬಾರಿ ಇದ್ದರು.ಜಿಲ್ಲೆಯ 50ಕ್ಕೂ ಹೆಚ್ಚು ತಾಂಡಾದಿಂದ ನೂರಾರು ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಪ್ರತಿಭಟನೆಯು ಮಹಾತ್ಮಾಗಾಂಧಿ ವೃತ್ತದಿಂದ ಆರಂಭವಾಗಿ ಮಹೇಂದ್ರಕರ ವೃತ್ತ, ಹುಯಿಲಗೋಳ ನಾರಾಯಣರಾವ ವೃತ್ತ, ಬಸವೇಶ್ವರ ವೃತ್ತ, ಕೆ.ಎಚ್.ಪಾಟೀಲ ವೃತ್ತ, ಭೂಮರಡ್ಡಿ ವೃತ್ತ, ಜನರಲ್ ಕಾರ್ಯಪ್ಪ ವೃತ್ತದ ಮಾರ್ಗವಾಗಿ ಕಾಟನ್ಸೇಲ್ ಸೊಸೈಟಿಗೆ ತೆರಳಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮನವಿ ಸಲ್ಲಿಸಿದರು.</p>.<p>ಭರವಸೆ: ಸಚಿವ ಎಚ್.ಕೆ.ಪಾಟೀಲ ಅವರು ಪ್ರತಿಭಟನಾ ನಿರತ ಮುಖಂಡರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿರುವುದರಿಂದ ನೇರವಾಗಿ ಮನವಿ ಸ್ವೀಕರಿಸಿಲು ಸಾಧ್ಯವಾಗುತ್ತಿಲ್ಲ, ಸರ್ಕಾರ ಏಕಪಕ್ಷಿಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಜ.3 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಮನವರಿಕೆ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>* * </p>.<p>ಸರ್ಕಾರ ದಲಿತರನ್ನು ಒಡೆದಾಳುವ ನೀತಿಯನ್ನು ಕೈಬಿಡಬೇಕು. ರಾಜಕೀಯ ಸ್ವಾರ್ಥಕ್ಕೆ ನಮ್ಮನ್ನು ಬಲಿಕೊಡಬೇಡಿ<br /> <strong>ಚಂದ್ರಕಾಂತ ಚವ್ಹಾಣ</strong><br /> ಬಂಜಾರಾ ಸಮುದಾಯದ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>