<p><strong>ಲಕ್ಷ್ಮೇಶ್ವರ:</strong> ಇಲ್ಲಿಗೆ ಸಮೀಪದ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಶುಕ್ರವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ರೈತರ ಹಿತ ಕಾಯುವ ಉದ್ದೇಶದಿಂದ ಸರ್ಕಾರ ಕಡಲೆ ಖರೀದಿ ಕೇಂದ್ರ ಆರಂಭಿಸಿದೆ. ಕಡಲೆ ಬೆಳೆದ ರೈತರು ತಮ್ಮ ಫಸಲನ್ನು ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು’ ಎಂದರು.</p>.<p>‘ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ರೈತರ ಅನುಕೂಲಕ್ಕಾಗಿ ಕೃಷಿ ಹೊಂಡಗಳನ್ನು ನಿರ್ಮಿಸಿ ಕೊಟ್ಟಿದೆ. ಮಳೆ ಕೈಕೊಟ್ಟಾಗ ರೈತರು ಕೃಷಿ ಹೊಂಡದಲ್ಲಿನ ನೀರನ್ನು ಬಳಸಿಕೊಂಡು ಕೃಷಿ ಮಾಡಬಹುದಾಗಿದೆ’ ಎಂದರು.</p>.<p>ಬಸವೆಣ್ಣೆಪ್ಪ ರೊಳ್ಳಿ, ಚಂದ್ರಗೌಡ ಪಾಟೀಲ, ರಾಮಣ್ಣ ಚಿಕ್ಕಣ್ಣವರ, ಯಲ್ಲಪ್ಪ ಹವಳದ, ಮಹಾದೇವಪ್ಪ ಹವಳದ, ಶೇಖರಗೌಡ ಪಾಟೀಲ, ಮಾನಪ್ಪ ಲಮಾಣಿ, ವೀರಯ್ಯ ಮಠಪತಿ, ಯಲ್ಲಪ್ಪಗೌಡ ಉದ್ದನಗೌಡ್ರ, ಶೇಖಣ್ಣ ಕರೆಣ್ಣವರ, ಹಾಲೇಶ ಡೊಳ್ಳಿನ ಹಾಜರಿದ್ದರು.</p>.<p>ಕಾರ್ಯಕ್ರಮದಲ್ಲಿ ಸಹಕಾರಿ ಇಲಾಖೆಯ ಬಸವರಾಜ ನಿಡಗುಂದಿ ಸ್ವಾಗತಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಇಲ್ಲಿಗೆ ಸಮೀಪದ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಶುಕ್ರವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ರೈತರ ಹಿತ ಕಾಯುವ ಉದ್ದೇಶದಿಂದ ಸರ್ಕಾರ ಕಡಲೆ ಖರೀದಿ ಕೇಂದ್ರ ಆರಂಭಿಸಿದೆ. ಕಡಲೆ ಬೆಳೆದ ರೈತರು ತಮ್ಮ ಫಸಲನ್ನು ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು’ ಎಂದರು.</p>.<p>‘ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ರೈತರ ಅನುಕೂಲಕ್ಕಾಗಿ ಕೃಷಿ ಹೊಂಡಗಳನ್ನು ನಿರ್ಮಿಸಿ ಕೊಟ್ಟಿದೆ. ಮಳೆ ಕೈಕೊಟ್ಟಾಗ ರೈತರು ಕೃಷಿ ಹೊಂಡದಲ್ಲಿನ ನೀರನ್ನು ಬಳಸಿಕೊಂಡು ಕೃಷಿ ಮಾಡಬಹುದಾಗಿದೆ’ ಎಂದರು.</p>.<p>ಬಸವೆಣ್ಣೆಪ್ಪ ರೊಳ್ಳಿ, ಚಂದ್ರಗೌಡ ಪಾಟೀಲ, ರಾಮಣ್ಣ ಚಿಕ್ಕಣ್ಣವರ, ಯಲ್ಲಪ್ಪ ಹವಳದ, ಮಹಾದೇವಪ್ಪ ಹವಳದ, ಶೇಖರಗೌಡ ಪಾಟೀಲ, ಮಾನಪ್ಪ ಲಮಾಣಿ, ವೀರಯ್ಯ ಮಠಪತಿ, ಯಲ್ಲಪ್ಪಗೌಡ ಉದ್ದನಗೌಡ್ರ, ಶೇಖಣ್ಣ ಕರೆಣ್ಣವರ, ಹಾಲೇಶ ಡೊಳ್ಳಿನ ಹಾಜರಿದ್ದರು.</p>.<p>ಕಾರ್ಯಕ್ರಮದಲ್ಲಿ ಸಹಕಾರಿ ಇಲಾಖೆಯ ಬಸವರಾಜ ನಿಡಗುಂದಿ ಸ್ವಾಗತಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>