‘ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ಅಂಗನವಾಡಿ ಚಿಣ್ಣರಿಗೆ ವೀರ ಮಹಿಳೆಯರ ವೇಷ– ಭೂಷಣ ಸ್ಪರ್ಧೆ, ಕಿಶೋರಿಯರ ಆರೋಗ್ಯ ತಪಾಸಣೆ ಏರ್ಪಡಿಸಲಾಗುತ್ತಿದೆ. ಗ್ರಾಮ ಪಂಚಾಯ್ತಿ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಯೋಜನೆಗಳು ಹಾಗೂ ಲಿಂಗಾನುಪಾತ ಸರಿಪಡಿಸುವ ಅಂಶಗಳ ಕುರಿತು ತರಬೇತಿ ಆಯೋಜಿಸಲಾಗುತ್ತಿದೆ’ ಎಂದರು. 2015ರಲ್ಲಿ ಆರಂಭಿಸಲಾಗಿರುವ ಈ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ, ಮಹಿಳಾ ಸಬಲೀಕರಣ, ಹೆಣ್ಣು ಭ್ರೂಣ ಹತ್ಯೆ ತಡೆಯುವ ಮತ್ತು ಲಿಂಗಾನುಪಾತ ಸರಿಪಡಿಸುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ. ಲಿಂಗಾನುಪಾತ ಆಧರಿಸಿ ರಾಜ್ಯದ ನಾಲ್ಕು ಜಿಲ್ಲೆಗಳು ಸೇರಿದಂತೆ ರಾಷ್ಟ್ರದ 100 ಜಿಲ್ಲೆಗಳಲ್ಲಿ ಕಾರ್ಯಕ್ರಮ ಆರಂಭಿಸಲಾಗಿದೆ.