<p><strong>ಗದಗ:</strong> ತ್ಯಾಗ, ಬಲಿದಾನಗಳ ಸ್ಮರಣೆಯ ಹಬ್ಬವಾದ ಬಕ್ರೀದ್ (ಈದ್ ಉಲ್ ಅದಾ) ಅನ್ನು ಅವಳಿ ನಗರದ ಮುಸ್ಲಿಮರು ಜನರು ವಿಜೃಂಭಣೆಯಿಂದ ಆಚರಿಸಿದರು.</p>.<p>ಶನಿವಾರ ಬೆಳಿಗ್ಗೆ ಹೊಸ ದಿರಿಸು ಧರಿಸಿ ‘ತಕ್ಭೀರ್’ ಮೊಳಗಿಸುತ್ತಾ ಮಸೀದಿ, ಈದ್ಗಾಗಳತ್ತ ಹೆಜ್ಜೆ ಹಾಕಿದರು. ಬಳಿಕ ಎಲ್ಲರೂ ಒಂದೆಡೆ ಸೇರಿ ಸಾಮೂಹಿಕ ಈದ್ ನಮಾಜ್ ಮಾಡಿದರು.</p>.<p>ಜಾಮೀಯಾ ಮಸೀದಿಯ ಮುಸ್ಲಿಂ ಧರ್ಮಗುರುಗಳು ಪ್ರಾರ್ಥನೆ ಮಾಡಿ, ‘ಮುಸ್ಲಿಮರು ತ್ಯಾಗ, ಬಲಿದಾನ, ಶಾಂತಿ, ಸಹೋದರತೆ ಮತ್ತು ಏಕತೆ ಸಂದೇಶ ಪಾಲಿಸುವ ಮೂಲಕ ಎಲ್ಲರೂ ಅಲ್ಹಾಹುವಿನ ಪ್ರೀತಿಗೆ ಪಾತ್ರರಾಗಬೇಕು. ವ್ಯಕ್ತಿತ್ವದಲ್ಲೂ ಅದನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಧರ್ಮಸಂದೇಶ ನೀಡಿದರು.</p>.<p>ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗಬೇಕು. ಸಕಾಲದಲ್ಲಿ ಮಳೆಯಾದರೆ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ಅನೂಕುಲವಾಗುತ್ತದೆ ಎಂದು ಮುಸ್ಲಿಂ ಸಮಾಜದವರು ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸಿದರು.</p>.<p>ನಗರದ ಡಂಬಳ ನಾಕಾ, ಮುಳಗುಂದ ನಾಕಾ ಸಮೀಪ ಇರುವ ಶಾಹಿ ಈದ್ಗಾ ಮೈದಾನ, ಬೆಟಗೇರಿಯ ರೈಲ್ವೆ ನಿಲ್ದಾಣ ಸಮೀಪದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಹಿರಿಯರು ಹಾಗೂ ಕಿರಿಯರೆನ್ನದೇ ಎಲ್ಲರೂ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಡಂಬಳ ನಾಕಾ ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮುಖಂಡರಾದ ಉಮರ್ ಫಾರೂಕ್ ಹುಬ್ಬಳ್ಳಿ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ ಸೇರಿ ಮತ್ತಿತರರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.</p>.<p>ನಮಾಜ್ ಬಳಿಕ ಸಚಿವ ಎಚ್.ಕೆ.ಪಾಟೀಲ ಮುಸ್ಲಿಂ ಸಮುದಾಯದವರಿಗೆ ಬಕ್ರಿದ್ ಹಬ್ಬದ ಶುಭಾಷಯ ತಿಳಿಸಿದರು.</p>.<p>ಬಕ್ರೀದ್ ಅಂಗವಾಗಿ ಮುಸ್ಲಿಮರು ಮನೆಗಳಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿದ್ದರು. ಗಳೆಯರು, ಬಂಧುಗಳನ್ನು ಆಹ್ವಾನಿಸಿ ಜತೆಯಾಗಿ ಊಟ ಮಾಡಿ ಸಂಭ್ರಮಿಸಿದರು.</p>.<p>ಸಮಾಜದ ಸ್ಥಿತಿವಂತರು ಬಡವರಿಗೆ ಆಹಾರ ಸಾಮಗ್ರಿ ಹಾಗೂ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ತ್ಯಾಗ, ಬಲಿದಾನಗಳ ಸ್ಮರಣೆಯ ಹಬ್ಬವಾದ ಬಕ್ರೀದ್ (ಈದ್ ಉಲ್ ಅದಾ) ಅನ್ನು ಅವಳಿ ನಗರದ ಮುಸ್ಲಿಮರು ಜನರು ವಿಜೃಂಭಣೆಯಿಂದ ಆಚರಿಸಿದರು.</p>.<p>ಶನಿವಾರ ಬೆಳಿಗ್ಗೆ ಹೊಸ ದಿರಿಸು ಧರಿಸಿ ‘ತಕ್ಭೀರ್’ ಮೊಳಗಿಸುತ್ತಾ ಮಸೀದಿ, ಈದ್ಗಾಗಳತ್ತ ಹೆಜ್ಜೆ ಹಾಕಿದರು. ಬಳಿಕ ಎಲ್ಲರೂ ಒಂದೆಡೆ ಸೇರಿ ಸಾಮೂಹಿಕ ಈದ್ ನಮಾಜ್ ಮಾಡಿದರು.</p>.<p>ಜಾಮೀಯಾ ಮಸೀದಿಯ ಮುಸ್ಲಿಂ ಧರ್ಮಗುರುಗಳು ಪ್ರಾರ್ಥನೆ ಮಾಡಿ, ‘ಮುಸ್ಲಿಮರು ತ್ಯಾಗ, ಬಲಿದಾನ, ಶಾಂತಿ, ಸಹೋದರತೆ ಮತ್ತು ಏಕತೆ ಸಂದೇಶ ಪಾಲಿಸುವ ಮೂಲಕ ಎಲ್ಲರೂ ಅಲ್ಹಾಹುವಿನ ಪ್ರೀತಿಗೆ ಪಾತ್ರರಾಗಬೇಕು. ವ್ಯಕ್ತಿತ್ವದಲ್ಲೂ ಅದನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಧರ್ಮಸಂದೇಶ ನೀಡಿದರು.</p>.<p>ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗಬೇಕು. ಸಕಾಲದಲ್ಲಿ ಮಳೆಯಾದರೆ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ಅನೂಕುಲವಾಗುತ್ತದೆ ಎಂದು ಮುಸ್ಲಿಂ ಸಮಾಜದವರು ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸಿದರು.</p>.<p>ನಗರದ ಡಂಬಳ ನಾಕಾ, ಮುಳಗುಂದ ನಾಕಾ ಸಮೀಪ ಇರುವ ಶಾಹಿ ಈದ್ಗಾ ಮೈದಾನ, ಬೆಟಗೇರಿಯ ರೈಲ್ವೆ ನಿಲ್ದಾಣ ಸಮೀಪದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಹಿರಿಯರು ಹಾಗೂ ಕಿರಿಯರೆನ್ನದೇ ಎಲ್ಲರೂ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಡಂಬಳ ನಾಕಾ ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮುಖಂಡರಾದ ಉಮರ್ ಫಾರೂಕ್ ಹುಬ್ಬಳ್ಳಿ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ ಸೇರಿ ಮತ್ತಿತರರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.</p>.<p>ನಮಾಜ್ ಬಳಿಕ ಸಚಿವ ಎಚ್.ಕೆ.ಪಾಟೀಲ ಮುಸ್ಲಿಂ ಸಮುದಾಯದವರಿಗೆ ಬಕ್ರಿದ್ ಹಬ್ಬದ ಶುಭಾಷಯ ತಿಳಿಸಿದರು.</p>.<p>ಬಕ್ರೀದ್ ಅಂಗವಾಗಿ ಮುಸ್ಲಿಮರು ಮನೆಗಳಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿದ್ದರು. ಗಳೆಯರು, ಬಂಧುಗಳನ್ನು ಆಹ್ವಾನಿಸಿ ಜತೆಯಾಗಿ ಊಟ ಮಾಡಿ ಸಂಭ್ರಮಿಸಿದರು.</p>.<p>ಸಮಾಜದ ಸ್ಥಿತಿವಂತರು ಬಡವರಿಗೆ ಆಹಾರ ಸಾಮಗ್ರಿ ಹಾಗೂ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>