ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಮನೆ ಮೇಲೆ ಎಸಿಬಿ ದಾಳಿ

Last Updated 22 ಅಕ್ಟೋಬರ್ 2020, 8:14 IST
ಅಕ್ಷರ ಗಾತ್ರ

ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್ ಎಸ್.ಎನ್. ಅವರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ನಗರದ ಕಂದಾಯ ಇಲಾಖೆ ಅಧಿಕಾರಿಗಳ ಬಡಾವಣೆಯಲ್ಲಿ ಇರುವ ಅವರ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿರುವ ಅವರ ಮನೆಯಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಗದುಗಿನಲ್ಲಿರುವ ಅವರ ಮನೆಯಲ್ಲಿ 400 ಗ್ರಾಂ ಚಿನ್ನ, ₹1 ಲಕ್ಷ ಹಣ ದೊರಕಿದೆ. ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT