ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಗಾಯಾಳುಗಳಿಗೆ ತಕ್ಷಣ ಆಸ್ಪತ್ರೆ ಗೆ ಕಳುಹಿಸಿದ ಸಚಿವ ಸಿ.ಸಿ.ಪಾಟೀಲ

Last Updated 11 ಸೆಪ್ಟೆಂಬರ್ 2019, 11:41 IST
ಅಕ್ಷರ ಗಾತ್ರ

ಗದಗ:ಟಂಟಂ ವಾಹನ ಪಲ್ಟಿಯಾಗಿ ಗಾಯಗೊಂಡಿದ್ದವರನ್ನು ಕಂಡು ಸಚಿವ ಸಿ.ಸಿ. ಪಾಟೀಲ, ಆಸ್ಪತ್ರೆಗೆ ದಾಖಲಿಸಿ‌ ಮಾನವೀಯತೆ ಮೆರದಿದ್ದಾರೆ.

ಗದಗ -ಹುಬ್ಬಳ್ಳಿ ರಸ್ತೆಯಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ಮಹಿಳೆಗೆ ಗಂಭೀರ ಗಾಯವಾಗಿ ನರಳುತ್ತಾ ಬಿದ್ದಿದ್ದರು.

ಸಚಿವ ಸಿ.ಸಿ. ಪಾಟೀಲ್ ಗದಗ ತಾಲ್ಲೂಕಿನ ಲಿಂಗದಾಳ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಇದೇ ಮಾರ್ಗವಾಗಿ ತೆರಳುತ್ತಿದ್ದರು. ಅಪಘಾತ ನೋಡಿ ವಾಹನ ನಿಲ್ಲಿಸಿದ ಸಚಿವರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದರು.

ಇನ್ನು ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಂ ಟಂ ಸವಾರರು ಹುಲಕೋಟಿ ಹಾಗೂ ಕುರ್ತಕೋಟಿ ಗ್ರಾಮದವರಾಗಿದ್ದು, ಗದಗನಿಂದ ಹುಲಕೋಟಿ ಕಡೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT