<p><strong>ಗದಗ</strong>: ‘ಪ್ರತಿಯೊಬ್ಬ ಮಹಿಳೆಯಲ್ಲಿಯೂ ಒಬ್ಬಳು ಮಹಾಕಾಳಿ, ಸರಸ್ವತಿ, ಲಕ್ಷ್ಮಿ ನೆಲೆಸಿರುತ್ತಾಳೆ. ಆ ಭಾವವನ್ನು ಜಾಗೃತಗೊಳಿಸಿಕೊಂಡರೆ ಸಾಮಾನ್ಯ ನಾರಿ ಕೂಡ ಎತ್ತರದ ಸ್ಥಾನಕ್ಕೆ ಏರಬಲ್ಲಳು’ ಎಂದು ಕನಕಗಿರಿಯ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ನಿರಂಜನಪ್ರಭು ಚನ್ನಮಲ್ಲ ಸ್ವಾಮೀಜಿ ಹೇಳಿದರು.</p>.<p>ನಗರದ ಮುಳಗುಂದ ನಾಕಾ ಬಳಿಯ ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಅನ್ನಪೂರ್ಣೇಶ್ವರಿ ದೇವಿ ಜಾತ್ರೆ ಹಾಗೂ ಜನಪದ ಜೀವನ ದರ್ಶನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಶ್ರೀದೇವಿಯು ಮಹಾಲಕ್ಷ್ಮಿಯಾಗಿ ಬಡತನ, ಸರಸ್ವತಿಯಾಗಿ ಅಜ್ಞಾನ ದೂರ ಮಾಡುತ್ತಾಳೆ. ದುರ್ಗಿಯಾಗಿ ದುಷ್ಟರನ್ನು ದಮನ ಮಾಡುತ್ತಾಳೆ. ಈ ಭಾವ, ಈ ಅನುಸಂಧಾನ ಶ್ರೀದೇವಿ ಜತೆಗೆ ಇದ್ದರೆ ಮನೆಯ ಮಕ್ಕಳು ಸಾಮಾನ್ಯ ಮಕ್ಕಳಾಗದೇ ವಿಶಿಷ್ಟ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ’ ಎಂದು ಹೇಳಿದರು.</p>.<p>ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹಿರಿಯ ಜಾನಪದ ವಿದ್ವಾಂಸ ಶಂಭು ಬಳಿಗಾರ ಅವರು ‘ಜನಪದ ಜೀವನ ದರ್ಶನ’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ರೇಣುಕಾ ಶರಣ ಪಾಟೀಲ, ಉದ್ಯಮಿ ಕಿರಣ ಪ್ರಕಾಶ ಭೂಮಾ, ಎಸ್.ಎಸ್.ಶಿವನಗೌಡ್ರ, ಸದಾಶಿವ ಚನ್ನಪ್ಪನವರ, ಹಿರಿಯ ಲೆಕ್ಕ ಪರಿಶೋಧಕರಾದ ವೀರೇಶ ಕೂಗು ಅವರನ್ನು ಸನ್ಮಾನಿಸಲಾಯಿತು.</p>.<p>ಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ.ಸಂಶಿಮಠ, ಅಧ್ಯಕ್ಷ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷೆ ಸುವರ್ಣಾ ಮದರಿಮಠ ವೇದಿಕೆಯಲ್ಲಿದ್ದರು.</p>.<p>ಪೂಜಾ ಸಮಿತಿ ಅಧ್ಯಕ್ಷ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷೆ ಅಶ್ವಿನಿ ನೀಲಗುಂದ, ವಿ.ಎಚ್.ದೇಸಾಯಿಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಪ್ರತಿಯೊಬ್ಬ ಮಹಿಳೆಯಲ್ಲಿಯೂ ಒಬ್ಬಳು ಮಹಾಕಾಳಿ, ಸರಸ್ವತಿ, ಲಕ್ಷ್ಮಿ ನೆಲೆಸಿರುತ್ತಾಳೆ. ಆ ಭಾವವನ್ನು ಜಾಗೃತಗೊಳಿಸಿಕೊಂಡರೆ ಸಾಮಾನ್ಯ ನಾರಿ ಕೂಡ ಎತ್ತರದ ಸ್ಥಾನಕ್ಕೆ ಏರಬಲ್ಲಳು’ ಎಂದು ಕನಕಗಿರಿಯ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ನಿರಂಜನಪ್ರಭು ಚನ್ನಮಲ್ಲ ಸ್ವಾಮೀಜಿ ಹೇಳಿದರು.</p>.<p>ನಗರದ ಮುಳಗುಂದ ನಾಕಾ ಬಳಿಯ ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಅನ್ನಪೂರ್ಣೇಶ್ವರಿ ದೇವಿ ಜಾತ್ರೆ ಹಾಗೂ ಜನಪದ ಜೀವನ ದರ್ಶನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಶ್ರೀದೇವಿಯು ಮಹಾಲಕ್ಷ್ಮಿಯಾಗಿ ಬಡತನ, ಸರಸ್ವತಿಯಾಗಿ ಅಜ್ಞಾನ ದೂರ ಮಾಡುತ್ತಾಳೆ. ದುರ್ಗಿಯಾಗಿ ದುಷ್ಟರನ್ನು ದಮನ ಮಾಡುತ್ತಾಳೆ. ಈ ಭಾವ, ಈ ಅನುಸಂಧಾನ ಶ್ರೀದೇವಿ ಜತೆಗೆ ಇದ್ದರೆ ಮನೆಯ ಮಕ್ಕಳು ಸಾಮಾನ್ಯ ಮಕ್ಕಳಾಗದೇ ವಿಶಿಷ್ಟ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ’ ಎಂದು ಹೇಳಿದರು.</p>.<p>ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹಿರಿಯ ಜಾನಪದ ವಿದ್ವಾಂಸ ಶಂಭು ಬಳಿಗಾರ ಅವರು ‘ಜನಪದ ಜೀವನ ದರ್ಶನ’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ರೇಣುಕಾ ಶರಣ ಪಾಟೀಲ, ಉದ್ಯಮಿ ಕಿರಣ ಪ್ರಕಾಶ ಭೂಮಾ, ಎಸ್.ಎಸ್.ಶಿವನಗೌಡ್ರ, ಸದಾಶಿವ ಚನ್ನಪ್ಪನವರ, ಹಿರಿಯ ಲೆಕ್ಕ ಪರಿಶೋಧಕರಾದ ವೀರೇಶ ಕೂಗು ಅವರನ್ನು ಸನ್ಮಾನಿಸಲಾಯಿತು.</p>.<p>ಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ.ಸಂಶಿಮಠ, ಅಧ್ಯಕ್ಷ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷೆ ಸುವರ್ಣಾ ಮದರಿಮಠ ವೇದಿಕೆಯಲ್ಲಿದ್ದರು.</p>.<p>ಪೂಜಾ ಸಮಿತಿ ಅಧ್ಯಕ್ಷ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷೆ ಅಶ್ವಿನಿ ನೀಲಗುಂದ, ವಿ.ಎಚ್.ದೇಸಾಯಿಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>