ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿಯಲ್ಲಿ ತಂತ್ರಜ್ಞಾನ ಬಳಸಿ’

ರೈತರಿಗಾಗಿ ರಾಜ್ಯ ಮಟ್ಟದ ಆನ್‍ಲೈನ್ ವೆಬಿನಾರ್ ಸರಣಿ ಆರಂಭ
Last Updated 1 ಸೆಪ್ಟೆಂಬರ್ 2021, 5:19 IST
ಅಕ್ಷರ ಗಾತ್ರ

ಗದಗ: ‘ಕೃಷಿ ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಅಳವಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ನಿವೃತ್ತ ಮಹಾ ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹೇಳಿದರು.

‘ರೈತರ ಸರ್ವತೋಮುಖ ಅಭಿವೃದ್ಧಿಗೆ ಕೃಷಿ ವಿಜ್ಞಾನದ ಕೊಡುಗೆ’ ಕುರಿತಾದ ಕೃಷಿ ತಜ್ಞರು ಹಾಗೂ ಯಶಸ್ವಿ ರೈತರ ನಡುವೆ ಸಂವಾದ- ರಾಜ್ಯ ಮಟ್ಟದ ಆನ್‍ಲೈನ್ ವೆಬಿನಾರ್ ಸರಣಿ ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ರಮೇಶ ಬಾಬು ಮಾತನಾಡಿ, ‘ರೈತರಿಗೆ ಹೆಚ್ಚಿನ ತಾಂತ್ರಿಕ ನೆರವು ನೀಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಇರುವ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ವರ್ಷದ ತರಬೇತಿ ನೀಡುತ್ತಿದ್ದು, ಈ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸ್ವದೇಶಿ ವಿಜ್ಞಾನ ಅಂದೋಲನದ ರಾಜ್ಯ ಘಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿವಿಧ ತಾಂತ್ರಿಕ ಸಂಸ್ಥೆಗಳ ನೆರವಿನೊಂದಿಗೆ ಹಮ್ಮಿಕೊಂಡ ಈ ವೆಬಿನಾರ್ ಸರಣಿಯು ರೈತರಿಗೆ ಉಪಯುಕ್ತವಾಗಲಿದೆ. ಜತೆಗೆ ರೈತರ ಆರ್ಥಿಕ ಸ್ಥಿತಿ ಹಾಗೂ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಲು ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಈ ಸರಣಿಯು ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6ರಿಂದ ರಾತ್ರಿ 8 ಗಂಟೆವರೆಗೆ ನಡೆಯಲಿದ್ದು, ರೈತರು ಇದರ ಸದುಯೋಗ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಸ್ವದೇಶಿ ಆಂದೋಲನ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಡಾ. ಎಚ್.ರಮೇಶ, ಕಾರ್ಯಾಧ್ಯಕ್ಷ ಡಾ. ಸಿ.ರೇಣುಕಾ ಪ್ರಸಾದ, ಡಾ.ಸಿ.ಎಂ.ರಫಿ, ಡಾ.ಪಿ.ಅಶೋಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು.

ವೆಬಿನಾರ್ ಸರಣಿಯಲ್ಲಿ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT