<p><strong>ಗದಗ: </strong>‘ಕೃಷಿ ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಅಳವಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ನಿವೃತ್ತ ಮಹಾ ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹೇಳಿದರು.</p>.<p>‘ರೈತರ ಸರ್ವತೋಮುಖ ಅಭಿವೃದ್ಧಿಗೆ ಕೃಷಿ ವಿಜ್ಞಾನದ ಕೊಡುಗೆ’ ಕುರಿತಾದ ಕೃಷಿ ತಜ್ಞರು ಹಾಗೂ ಯಶಸ್ವಿ ರೈತರ ನಡುವೆ ಸಂವಾದ- ರಾಜ್ಯ ಮಟ್ಟದ ಆನ್ಲೈನ್ ವೆಬಿನಾರ್ ಸರಣಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ರಮೇಶ ಬಾಬು ಮಾತನಾಡಿ, ‘ರೈತರಿಗೆ ಹೆಚ್ಚಿನ ತಾಂತ್ರಿಕ ನೆರವು ನೀಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಇರುವ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ವರ್ಷದ ತರಬೇತಿ ನೀಡುತ್ತಿದ್ದು, ಈ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸ್ವದೇಶಿ ವಿಜ್ಞಾನ ಅಂದೋಲನದ ರಾಜ್ಯ ಘಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿವಿಧ ತಾಂತ್ರಿಕ ಸಂಸ್ಥೆಗಳ ನೆರವಿನೊಂದಿಗೆ ಹಮ್ಮಿಕೊಂಡ ಈ ವೆಬಿನಾರ್ ಸರಣಿಯು ರೈತರಿಗೆ ಉಪಯುಕ್ತವಾಗಲಿದೆ. ಜತೆಗೆ ರೈತರ ಆರ್ಥಿಕ ಸ್ಥಿತಿ ಹಾಗೂ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಲು ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ಸರಣಿಯು ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6ರಿಂದ ರಾತ್ರಿ 8 ಗಂಟೆವರೆಗೆ ನಡೆಯಲಿದ್ದು, ರೈತರು ಇದರ ಸದುಯೋಗ ಪಡೆಯಬೇಕು ಎಂದು ಅವರು ಮನವಿ ಮಾಡಿದರು.</p>.<p>ಸ್ವದೇಶಿ ಆಂದೋಲನ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಡಾ. ಎಚ್.ರಮೇಶ, ಕಾರ್ಯಾಧ್ಯಕ್ಷ ಡಾ. ಸಿ.ರೇಣುಕಾ ಪ್ರಸಾದ, ಡಾ.ಸಿ.ಎಂ.ರಫಿ, ಡಾ.ಪಿ.ಅಶೋಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು.</p>.<p>ವೆಬಿನಾರ್ ಸರಣಿಯಲ್ಲಿ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಕೃಷಿ ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಅಳವಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ನಿವೃತ್ತ ಮಹಾ ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹೇಳಿದರು.</p>.<p>‘ರೈತರ ಸರ್ವತೋಮುಖ ಅಭಿವೃದ್ಧಿಗೆ ಕೃಷಿ ವಿಜ್ಞಾನದ ಕೊಡುಗೆ’ ಕುರಿತಾದ ಕೃಷಿ ತಜ್ಞರು ಹಾಗೂ ಯಶಸ್ವಿ ರೈತರ ನಡುವೆ ಸಂವಾದ- ರಾಜ್ಯ ಮಟ್ಟದ ಆನ್ಲೈನ್ ವೆಬಿನಾರ್ ಸರಣಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ರಮೇಶ ಬಾಬು ಮಾತನಾಡಿ, ‘ರೈತರಿಗೆ ಹೆಚ್ಚಿನ ತಾಂತ್ರಿಕ ನೆರವು ನೀಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಇರುವ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ವರ್ಷದ ತರಬೇತಿ ನೀಡುತ್ತಿದ್ದು, ಈ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸ್ವದೇಶಿ ವಿಜ್ಞಾನ ಅಂದೋಲನದ ರಾಜ್ಯ ಘಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿವಿಧ ತಾಂತ್ರಿಕ ಸಂಸ್ಥೆಗಳ ನೆರವಿನೊಂದಿಗೆ ಹಮ್ಮಿಕೊಂಡ ಈ ವೆಬಿನಾರ್ ಸರಣಿಯು ರೈತರಿಗೆ ಉಪಯುಕ್ತವಾಗಲಿದೆ. ಜತೆಗೆ ರೈತರ ಆರ್ಥಿಕ ಸ್ಥಿತಿ ಹಾಗೂ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಲು ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ಸರಣಿಯು ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6ರಿಂದ ರಾತ್ರಿ 8 ಗಂಟೆವರೆಗೆ ನಡೆಯಲಿದ್ದು, ರೈತರು ಇದರ ಸದುಯೋಗ ಪಡೆಯಬೇಕು ಎಂದು ಅವರು ಮನವಿ ಮಾಡಿದರು.</p>.<p>ಸ್ವದೇಶಿ ಆಂದೋಲನ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಡಾ. ಎಚ್.ರಮೇಶ, ಕಾರ್ಯಾಧ್ಯಕ್ಷ ಡಾ. ಸಿ.ರೇಣುಕಾ ಪ್ರಸಾದ, ಡಾ.ಸಿ.ಎಂ.ರಫಿ, ಡಾ.ಪಿ.ಅಶೋಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು.</p>.<p>ವೆಬಿನಾರ್ ಸರಣಿಯಲ್ಲಿ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>