<p>ಗದಗ: ‘ಬಿತ್ತನೆ ಪೂರ್ವದಲ್ಲಿ ರೈತರು ಬೀಜೋಪಚಾರ ಮಾಡಬೇಕು. ಬೀಜೋಪಚಾರ ಮಾಡುವುದರಿಂದ ಬಿತ್ತನೆ ಮಾಡಿದ ಪ್ರತಿ ಕಾಳು ಮೊಳಕೆ ಒಡೆಯುವುದಲ್ಲದೆ ಯಾವುದೇ ಕೀಟಭಾದೆಗೆ ಒಳಗಾಗುವುದಿಲ್ಲ’ ಎಂದು ಗದಗ ಕೃಷಿ ಇಲಾಖೆ ಉಪ ನಿರ್ದೇಶಕಿ ಸ್ಫೂರ್ತಿ ಜಿ.ಎಸ್. ಹೇಳಿದರು.</p>.<p>ತಾಲ್ಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಕೃಷಿ ಇಲಾಖೆ, ಬೆಟಗೇರಿ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ನಡೆದ ಬೀಜೋಪಚಾರ ಆಂದೋಲನ ಮತ್ತು ಕೀಟನಾಶಕಗಳ ಸುರಕ್ಷಿತ ಬಳಕೆ ಕುರಿತಾದ ಪ್ರಾತ್ಯಕ್ಷಿಕೆ ಸಹಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಕೀಟನಾಶಕ ಬಳಕೆ ಮಾಡುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು’ ಎಂದು ಹೇಳಿದರು.</p>.<p>ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ಪರೀಕ್ಷೆ ವಿಜ್ಞಾನಿ ಎನ್.ಎಚ್.ಭಂಡಿ ಮಾತನಾಡಿ, ‘ಹೆಸರು ಕಡಿಮೆ ಅವಧಿಯ ದ್ವಿದಳ ಧಾನ್ಯದ ಬೆಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಬೆಳೆಯುವುದರಿಂದ ಬಿತ್ತನೆ ಮಾಡುವಾಗ ಒಂದು ಕೆ.ಜಿ. ಬೀಜಕ್ಕೆ 4 ಗ್ರಾಂ ಟ್ರೈಕೋಡ್ರೋಮಾ ಲೇಪನ ಮಾಡಬೇಕು. ಒಂದು ಎಕರೆ ಬೀಜಕ್ಕೆ 200 ಗ್ರಾಂ ರೈಜೋಬಿಯಂ, 500 ಗ್ರಾಂ ರಂಜಕ ಕರಗಿಸುವ ಗೊಬ್ಬರದ ಜೊತೆಗೆ ಬೆರೆಸಿ ಬಿತ್ತನೆ ಮಾಡಬೇಕು’ ಎಂದು ತಿಳಿಸಿದರು.</p>.<p>‘40 ದಿನದ ಬೆಳೆಯಾದ ನಂತರ ಎರಡು ಬಾರಿ ಅಂತರ ಬೇಸಾಯ ಮಾಡಿ ಕಳೆ ನಿಯಂತ್ರಣ ಮಾಡಬೇಕು. ಭೂಮಿಯಲ್ಲಿ ತೇವಾಂಶ ಕಾಪಾಡಿಕೊಂಡು ಹೋಗಲು ಎಡೆ ಕುಂಟಿಯನ್ನು ಒಡೆಯಬೇಕು’ ಎಂದು ತಿಳಿಸಿದರು.</p>.<p>‘ಸದ್ಯದ ಹವಾಮಾನ ಪರಿಸ್ಥಿತಿ ತೇವಾಂಶದಿಂದ ಕೂಡಿದ್ದು ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು ನ್ಯಾನೊ ಯೂರಿಯಾ ಗೊಬ್ಬರವನ್ನು ಸಿಂಪಡಣೆ ಮಾಡುವುದರಿಂದ ರೋಗವನ್ನು ಹತೋಟಿಗೆ ತರಬಹುದು’ ಎಂದು ತಿಳಿಸಿದರು.</p>.<p>ಗ್ರಾಮದ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಬಿತ್ತನೆ ಪೂರ್ವದಲ್ಲಿ ರೈತರು ಬೀಜೋಪಚಾರ ಮಾಡಬೇಕು. ಬೀಜೋಪಚಾರ ಮಾಡುವುದರಿಂದ ಬಿತ್ತನೆ ಮಾಡಿದ ಪ್ರತಿ ಕಾಳು ಮೊಳಕೆ ಒಡೆಯುವುದಲ್ಲದೆ ಯಾವುದೇ ಕೀಟಭಾದೆಗೆ ಒಳಗಾಗುವುದಿಲ್ಲ’ ಎಂದು ಗದಗ ಕೃಷಿ ಇಲಾಖೆ ಉಪ ನಿರ್ದೇಶಕಿ ಸ್ಫೂರ್ತಿ ಜಿ.ಎಸ್. ಹೇಳಿದರು.</p>.<p>ತಾಲ್ಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಕೃಷಿ ಇಲಾಖೆ, ಬೆಟಗೇರಿ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ನಡೆದ ಬೀಜೋಪಚಾರ ಆಂದೋಲನ ಮತ್ತು ಕೀಟನಾಶಕಗಳ ಸುರಕ್ಷಿತ ಬಳಕೆ ಕುರಿತಾದ ಪ್ರಾತ್ಯಕ್ಷಿಕೆ ಸಹಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಕೀಟನಾಶಕ ಬಳಕೆ ಮಾಡುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು’ ಎಂದು ಹೇಳಿದರು.</p>.<p>ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ಪರೀಕ್ಷೆ ವಿಜ್ಞಾನಿ ಎನ್.ಎಚ್.ಭಂಡಿ ಮಾತನಾಡಿ, ‘ಹೆಸರು ಕಡಿಮೆ ಅವಧಿಯ ದ್ವಿದಳ ಧಾನ್ಯದ ಬೆಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಬೆಳೆಯುವುದರಿಂದ ಬಿತ್ತನೆ ಮಾಡುವಾಗ ಒಂದು ಕೆ.ಜಿ. ಬೀಜಕ್ಕೆ 4 ಗ್ರಾಂ ಟ್ರೈಕೋಡ್ರೋಮಾ ಲೇಪನ ಮಾಡಬೇಕು. ಒಂದು ಎಕರೆ ಬೀಜಕ್ಕೆ 200 ಗ್ರಾಂ ರೈಜೋಬಿಯಂ, 500 ಗ್ರಾಂ ರಂಜಕ ಕರಗಿಸುವ ಗೊಬ್ಬರದ ಜೊತೆಗೆ ಬೆರೆಸಿ ಬಿತ್ತನೆ ಮಾಡಬೇಕು’ ಎಂದು ತಿಳಿಸಿದರು.</p>.<p>‘40 ದಿನದ ಬೆಳೆಯಾದ ನಂತರ ಎರಡು ಬಾರಿ ಅಂತರ ಬೇಸಾಯ ಮಾಡಿ ಕಳೆ ನಿಯಂತ್ರಣ ಮಾಡಬೇಕು. ಭೂಮಿಯಲ್ಲಿ ತೇವಾಂಶ ಕಾಪಾಡಿಕೊಂಡು ಹೋಗಲು ಎಡೆ ಕುಂಟಿಯನ್ನು ಒಡೆಯಬೇಕು’ ಎಂದು ತಿಳಿಸಿದರು.</p>.<p>‘ಸದ್ಯದ ಹವಾಮಾನ ಪರಿಸ್ಥಿತಿ ತೇವಾಂಶದಿಂದ ಕೂಡಿದ್ದು ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು ನ್ಯಾನೊ ಯೂರಿಯಾ ಗೊಬ್ಬರವನ್ನು ಸಿಂಪಡಣೆ ಮಾಡುವುದರಿಂದ ರೋಗವನ್ನು ಹತೋಟಿಗೆ ತರಬಹುದು’ ಎಂದು ತಿಳಿಸಿದರು.</p>.<p>ಗ್ರಾಮದ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>