ಜನರ ಸಾಂಪ್ರದಾಯಿಕ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಚಿನ್ನಾಭರಣ ಅಂಗಡಿಗಳು ಗ್ರಾಹಕರನ್ನು ಸೆಳೆಯಲು ಹಲವು ಕೊಡುಗೆಗಳನ್ನು ಪ್ರಕಟಿಸಿದ್ದರು. ಕೆಲವು ಮಳಿಗೆಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ವೇಸ್ಟೇಜ್ ಮತ್ತು ಮೇಕಿಂಗ್ ಚಾರ್ಜ್ನಲ್ಲಿ ರಿಯಾಯ್ತಿ ನೀಡಲಾಗಿತ್ತು. ಮುಂಗಡವಾಗಿ ಕಾಯ್ದಿರಿಸಿದವರು ಮಂಗಳಾರ ಬೆಳಿಗ್ಗೆಯೇ ಅಂಗಡಿಗೆ ಬಂದು ಆಭರಣ ಖರೀದಿಸಿ, ಮನೆಗೆ ತಂದು ಪೂಜೆ ಸಲ್ಲಿಸಿದ ಬಳಿಕ ಅವುಗಳನ್ನು ಧರಿಸಿ, ಸಂಭ್ರಮಿಸಿದರು.