<p><strong>ರೋಣ</strong>: ‘ಮನುಷ್ಯನಿಗೆ ಶಿಕ್ಷಣ ಅತೀ ಮುಖ್ಯ. ಪ್ರತಿಯೊಬ್ಬರಲ್ಲಿಯೂ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಯು ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದರು.</p>.<p>ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಆರ್.ಪಾಟೀಲ ಪ್ರತಿಷ್ಠಾನ ಇವರ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಎಂಬುದು ಸಾಗರದ್ದಂತೆ ಎಷ್ಟು ಪಡೆದುಕೊಂಡರು ಸಾಲದು. ನಮ್ಮಲ್ಲಿರುವ ಪ್ರತಿಭೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಜೀವನದಲ್ಲಿ ಸಾಧನೆ ಮೂಲವೇ ಶಿಕ್ಷಣವಾಗಿದೆ’ ಎಂದರು.</p>.<p>ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಗುರು ಹಾಗೂ ಗುರಿ ಮುಖ್ಯ. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುವಿನ ಮಾರ್ಗದರ್ಶನ ಹಾಗೂ ಸ್ಪಷ್ಟವಾದ ಗುರಿ ಇದ್ದಾಗ ಮಾತ್ರ ಪ್ರತಿಯೊಬ್ಬರು ಸಾಧನೆ ಶಿಖರವೇರಲು ಸಾಧ್ಯ’ ಎಂದು ಹೇಳಿದರು.</p>.<p>ಐ.ಎಸ್.ಪಾಟೀಲ, ಜಿ.ಎಸ್.ಟಿ ಸಹಾಯಕ ಆಯುಕ್ತರಾದ ಅಶೋಕ ಮಿರ್ಜಿ, ಸಾಧನಾ ಅಕಾಡೆಮಿಯ ಬಿ.ಮಂಜುನಾಥ, ನರೇಗಲ್ಲ ಅನ್ನದಾನೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವಾಯ್.ಸಿ. ಪಾಟೀಲ, ರಾಜೀವ್ ಗಾಂಧಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಬಿ. ಕೊಟ್ಟೂರಶೆಟ್ಟರ, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಿ.ಎಫ್. ಚೇಗರಡ್ಡಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ‘ಮನುಷ್ಯನಿಗೆ ಶಿಕ್ಷಣ ಅತೀ ಮುಖ್ಯ. ಪ್ರತಿಯೊಬ್ಬರಲ್ಲಿಯೂ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಯು ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದರು.</p>.<p>ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಆರ್.ಪಾಟೀಲ ಪ್ರತಿಷ್ಠಾನ ಇವರ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಎಂಬುದು ಸಾಗರದ್ದಂತೆ ಎಷ್ಟು ಪಡೆದುಕೊಂಡರು ಸಾಲದು. ನಮ್ಮಲ್ಲಿರುವ ಪ್ರತಿಭೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಜೀವನದಲ್ಲಿ ಸಾಧನೆ ಮೂಲವೇ ಶಿಕ್ಷಣವಾಗಿದೆ’ ಎಂದರು.</p>.<p>ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಗುರು ಹಾಗೂ ಗುರಿ ಮುಖ್ಯ. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುವಿನ ಮಾರ್ಗದರ್ಶನ ಹಾಗೂ ಸ್ಪಷ್ಟವಾದ ಗುರಿ ಇದ್ದಾಗ ಮಾತ್ರ ಪ್ರತಿಯೊಬ್ಬರು ಸಾಧನೆ ಶಿಖರವೇರಲು ಸಾಧ್ಯ’ ಎಂದು ಹೇಳಿದರು.</p>.<p>ಐ.ಎಸ್.ಪಾಟೀಲ, ಜಿ.ಎಸ್.ಟಿ ಸಹಾಯಕ ಆಯುಕ್ತರಾದ ಅಶೋಕ ಮಿರ್ಜಿ, ಸಾಧನಾ ಅಕಾಡೆಮಿಯ ಬಿ.ಮಂಜುನಾಥ, ನರೇಗಲ್ಲ ಅನ್ನದಾನೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವಾಯ್.ಸಿ. ಪಾಟೀಲ, ರಾಜೀವ್ ಗಾಂಧಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಬಿ. ಕೊಟ್ಟೂರಶೆಟ್ಟರ, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಿ.ಎಫ್. ಚೇಗರಡ್ಡಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>