<p><strong>ಗದಗ</strong>: ‘ಹಮಾಲಿ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಭವಿಷ್ಯನಿಧಿ ಪಿಂಚಣಿ, ಸಹಜ ಮರಣ ಪರಿಹಾರ ಸೇರಿದಂತೆ ಸಮಗ್ರ ಕಲ್ಯಾಣ ಸೌಲಭ್ಯಗಳನ್ನು ಜಾರಿ ಮಾಡಬೇಕು. ಇದಕ್ಕಾಗಿ ಪ್ರಸ್ತುತ ಬಜೆಟ್ನಲ್ಲಿ ₹1,000 ಕೋಟಿ ಮೀಸಲಿಡಬೇಕು’ ಎಂದು ಗದಗ ಸಿಐಟಿಯು ಅಧ್ಯಕ್ಷ ಮಹೇಶ ಹಿರೇಮಠ ಆಗ್ರಹಿಸಿದರು.</p>.<p>ಹಮಾಲಿ ಕಾರ್ಮಿಕರು ಸೇರಿದಂತೆ ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ಗದಗ ವತಿಯಿಂದ ಒಂದು ದಿನದ ಮುಷ್ಕರ ನಡೆಸಿ, ಗದಗ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಕಲ್ಯಾಣ ಯೋಜನೆಗಳ ಕಲ್ಪನೆ ದುರ್ಬಲಗೊಳಿಸಿ ದೇಶದ ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿರುವ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ವಾಪಸ್ ಪಡೆಯಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಅಸಂಘಟಿತ ವಲಯದ ಶ್ರಮಜೀವಿಗಳಾದ ಗ್ರಾಮೀಣ, ನಗರ ಹಮಾಲಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ವಸತಿ, ಸಾಮಾಜಿಕ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಮುಖಂಡೆ ಯಶೋದಾ ಬೆಟಗೇರಿ ಮಾತನಾಡಿ, ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಲು ರಾಜ್ಯದ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹಿಳಾ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ವಿಶ್ರಾಂತಿ ಗೃಹ, ಶೌಚಾಲಯ ನಿರ್ಮಾಣ ಮತ್ತು ಕನಿಷ್ಠಿ ವೇತನ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಮಿಕ ಮುಖಂಡರಾದ ಬಸವರಾಜ ಮಂತೂರ, ರುದ್ರಪ್ಪ ಕಂದಗಲ್ಲ, ಸಾವಿತ್ರಿ ಸಬ್ನಿಸ್, ಶಾರದಾ ರೋಣದ, ಪೀರು ರಾಠೋಡ, ಮುತ್ತಪ್ಪ ಚಲವಾದಿ, ನಿಂಗಪ್ಪ ಸರಸೂರ, ಬಸವರಾಜ, ಸಂತೋಷ ಕುಂಬಾರ, ಹಾಲಪ್ಪ ಬಂಡಿವಡ್ಡರ, ತಾಂಬ್ರಗುಂಡಿ, ರುದ್ರಗೌಡ ಸಂಕನಗೌಡ್ರ ಇದ್ದರು.</p>.<p><strong>ಕನಿಷ್ಠ ವೇತನ</strong></p><p>ವೈಜ್ಞಾನಿಕವಾಗಿ ಮರು ಪರಿಷ್ಕರಣೆಯಾಗಬೇಕು. ಹಮಾಲಿ ಕಾರ್ಮಿಕರಿಗೆ ಕೇಂದ್ರ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ಸೂಕ್ತವಾದ ಗುಂಪು ವಸತಿ ಯೋಜನೆಗಳನ್ನು ರೂಪಿಸಬೇಕು ಮಾರುತಿ ಚಿಟಗಿ ಕಾರ್ಮಿಕ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಹಮಾಲಿ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಭವಿಷ್ಯನಿಧಿ ಪಿಂಚಣಿ, ಸಹಜ ಮರಣ ಪರಿಹಾರ ಸೇರಿದಂತೆ ಸಮಗ್ರ ಕಲ್ಯಾಣ ಸೌಲಭ್ಯಗಳನ್ನು ಜಾರಿ ಮಾಡಬೇಕು. ಇದಕ್ಕಾಗಿ ಪ್ರಸ್ತುತ ಬಜೆಟ್ನಲ್ಲಿ ₹1,000 ಕೋಟಿ ಮೀಸಲಿಡಬೇಕು’ ಎಂದು ಗದಗ ಸಿಐಟಿಯು ಅಧ್ಯಕ್ಷ ಮಹೇಶ ಹಿರೇಮಠ ಆಗ್ರಹಿಸಿದರು.</p>.<p>ಹಮಾಲಿ ಕಾರ್ಮಿಕರು ಸೇರಿದಂತೆ ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ಗದಗ ವತಿಯಿಂದ ಒಂದು ದಿನದ ಮುಷ್ಕರ ನಡೆಸಿ, ಗದಗ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಕಲ್ಯಾಣ ಯೋಜನೆಗಳ ಕಲ್ಪನೆ ದುರ್ಬಲಗೊಳಿಸಿ ದೇಶದ ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿರುವ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ವಾಪಸ್ ಪಡೆಯಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಅಸಂಘಟಿತ ವಲಯದ ಶ್ರಮಜೀವಿಗಳಾದ ಗ್ರಾಮೀಣ, ನಗರ ಹಮಾಲಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ವಸತಿ, ಸಾಮಾಜಿಕ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಮುಖಂಡೆ ಯಶೋದಾ ಬೆಟಗೇರಿ ಮಾತನಾಡಿ, ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಲು ರಾಜ್ಯದ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹಿಳಾ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ವಿಶ್ರಾಂತಿ ಗೃಹ, ಶೌಚಾಲಯ ನಿರ್ಮಾಣ ಮತ್ತು ಕನಿಷ್ಠಿ ವೇತನ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಮಿಕ ಮುಖಂಡರಾದ ಬಸವರಾಜ ಮಂತೂರ, ರುದ್ರಪ್ಪ ಕಂದಗಲ್ಲ, ಸಾವಿತ್ರಿ ಸಬ್ನಿಸ್, ಶಾರದಾ ರೋಣದ, ಪೀರು ರಾಠೋಡ, ಮುತ್ತಪ್ಪ ಚಲವಾದಿ, ನಿಂಗಪ್ಪ ಸರಸೂರ, ಬಸವರಾಜ, ಸಂತೋಷ ಕುಂಬಾರ, ಹಾಲಪ್ಪ ಬಂಡಿವಡ್ಡರ, ತಾಂಬ್ರಗುಂಡಿ, ರುದ್ರಗೌಡ ಸಂಕನಗೌಡ್ರ ಇದ್ದರು.</p>.<p><strong>ಕನಿಷ್ಠ ವೇತನ</strong></p><p>ವೈಜ್ಞಾನಿಕವಾಗಿ ಮರು ಪರಿಷ್ಕರಣೆಯಾಗಬೇಕು. ಹಮಾಲಿ ಕಾರ್ಮಿಕರಿಗೆ ಕೇಂದ್ರ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ಸೂಕ್ತವಾದ ಗುಂಪು ವಸತಿ ಯೋಜನೆಗಳನ್ನು ರೂಪಿಸಬೇಕು ಮಾರುತಿ ಚಿಟಗಿ ಕಾರ್ಮಿಕ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>