<p><strong>ಗದಗ:</strong> ‘ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನವೇ ಜ್ಞಾನ, ಶ್ರಮ, ಮಾನವೀಯತೆ ಮತ್ತು ಅಸಮಾನತೆಯ ವಿರುದ್ಧದ ಹೋರಾಟದ ಸಂಕೇತ. ಅವರ ಚಿಂತನೆಗಳು ಇಂದಿಗೂ ಸಮಾಜ ಪರಿವರ್ತನೆಗೆ ದಿಕ್ಕು ತೋರಿಸುತ್ತಿವೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>‘ಡಾ. ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು ಹರಿಕಾರರು. ಸಂವಿಧಾನದ ಮೌಲ್ಯಗಳನ್ನು ಕೇವಲ ಓದುವುದಲ್ಲ; ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಗೌರವ’ ಎಂದರು.</p>.<p>ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳ ವಿಶೇಷಾಧಿಕಾರಿ ಎಂ.ಬಿ.ಚನ್ನಪ್ಪಗೌಡರ, ಆಡಳಿತಾಧಿಕಾರಿ ಶಶಿಭೂಷಣ ದೇವುರ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಸರ್ಟಿಫಿಕೇಟ್ ಕೋರ್ಸ್ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜಕ ಪ್ರಕಾಶ್ ಮಾಚೇನಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.</p>.<div><blockquote>ಶೋಷಿತರ ಏಳಿಗೆಗೆ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಹೋರಾಟಗಾರ ಡಾ. ಬಿ.ಆರ್.ಅಂಬೇಡ್ಕರ್. ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ರಾಷ್ಟ್ರದಾದ್ಯಂತ ಆಚರಿಸಲಾಗುವುದು. ಸಂವಿಧಾನ ಗೌರವಿಸುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಿದೆ </blockquote><span class="attribution">ಡಾ.ರಾಜೇಂದ್ರ ಎಸ್ ಗಡಾದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನವೇ ಜ್ಞಾನ, ಶ್ರಮ, ಮಾನವೀಯತೆ ಮತ್ತು ಅಸಮಾನತೆಯ ವಿರುದ್ಧದ ಹೋರಾಟದ ಸಂಕೇತ. ಅವರ ಚಿಂತನೆಗಳು ಇಂದಿಗೂ ಸಮಾಜ ಪರಿವರ್ತನೆಗೆ ದಿಕ್ಕು ತೋರಿಸುತ್ತಿವೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.</p>.<p>ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>‘ಡಾ. ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು ಹರಿಕಾರರು. ಸಂವಿಧಾನದ ಮೌಲ್ಯಗಳನ್ನು ಕೇವಲ ಓದುವುದಲ್ಲ; ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಗೌರವ’ ಎಂದರು.</p>.<p>ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳ ವಿಶೇಷಾಧಿಕಾರಿ ಎಂ.ಬಿ.ಚನ್ನಪ್ಪಗೌಡರ, ಆಡಳಿತಾಧಿಕಾರಿ ಶಶಿಭೂಷಣ ದೇವುರ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಸರ್ಟಿಫಿಕೇಟ್ ಕೋರ್ಸ್ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜಕ ಪ್ರಕಾಶ್ ಮಾಚೇನಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.</p>.<div><blockquote>ಶೋಷಿತರ ಏಳಿಗೆಗೆ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಹೋರಾಟಗಾರ ಡಾ. ಬಿ.ಆರ್.ಅಂಬೇಡ್ಕರ್. ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ರಾಷ್ಟ್ರದಾದ್ಯಂತ ಆಚರಿಸಲಾಗುವುದು. ಸಂವಿಧಾನ ಗೌರವಿಸುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಿದೆ </blockquote><span class="attribution">ಡಾ.ರಾಜೇಂದ್ರ ಎಸ್ ಗಡಾದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>