ರೋಣ ತಾಲ್ಲೂಕಿನ ವಿವಿಧೆಡೆ ಜಾನುವಾರು ಗಣತಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳುತ್ತಿರುವ ಕುರಿತೂ ಅಧ್ಯಕ್ಷೆ ಸಭೆಯ ಗಮನ ಸೆಳೆದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ತಪ್ಪು ಮಾಹಿತಿ ನೀಡುವ ಬದಲು, ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಶ್ರಮಿಸಿ’ ಎಂದರು. ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎಸ್.ಸಿ.ಮಹೇಶ, ಯೋಜನಾಧಿಕಾರಿ ಬಿ.ಆರ್.ಪಾಟೀಲ ಇದ್ದರು.