<p><strong>ನರಗುಂದ</strong>: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ 8ನೇ ವಾರ್ಡಿನ ಅನ್ನಪೂರ್ಣ ಸಿದ್ದಪ್ಪ ಯಲಿಗಾರ , ಉಪಾಧ್ಯಕ್ಷರಾಗಿ 20ನೇ ವಾರ್ಡಿನ ಕಾಶವ್ವ ಬಸಪ್ಪ ಮಳಗಿ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಬಿಜೆಪಿಗರೇ ಮತ್ತೆ ಅಧಿಕಾರದ ಗದ್ದುಗೆ ಏರಿದರು.</p>.<p>ಎರಡು ಸ್ಥಾನಕ್ಕೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಶ್ರೀಶೈಲ ತಳವಾರ ಅವರು ಅಧ್ಯಕ್ಷ, ಉಪಾಧ್ಯಕ್ಷರನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅಭಿನಂದಿಸಿದರು.</p>.<p>ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ‘ಅಭಿವೃದ್ಧಿ ಪರ ಆಡಳಿತ ನಡೆಸಬೇಕು. ಪಟ್ಟಣದ ಪ್ರತಿ ವಾರ್ಡಿನಲ್ಲೂ ಸಂಚರಿಸಿ ಸಮಸ್ಯೆಗಳನ್ನು ಆಲಿಸಬೇಕು. ಇಲ್ಲಿ 25 ವರ್ಷಗಳಿಂದ ಸುದೀರ್ಘ ಅವಧಿಯ ಆಡಳಿತವನ್ನು ಬಿಜೆಪಿ ನಡೆಸುತ್ತಾ ಬಂದಿದೆ’ ಎಂದರು.</p>.<p>‘ನನ್ನ ಹಿಂದಿನ ಅಧಿಕಾರದ ಅವಧಿಯಲ್ಲಿ ನಗರ ಅಭಿವೃದ್ಧಿಯಾಗಿದೆ. ಉಳಿದ ಅಭಿವೃದ್ಧಿ ಕೆಲಸ ಪೂರ್ಣಗೊಳಿಸಬೇಕು. ಇದೀಗ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಅನುದಾನ ಬಂದಿಲ್ಲ. ಇದರ ನಡುವೆಯೂ ಪಟ್ಟಣವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಮುಖರಾದ ಎಸ್.ಆರ್. ಪಾಟೀಲ, ಬಸು ಪಾಟೀಲ, ಎ.ಎಂ.ಹುಡೇದ, ಸಂಭಾಜಿ ಕಾಶೀದ, ಶಿವಾನಂದ ಮುತವಾಡ, ಶಂಕರ ಪಲ್ಟನಕರ, ಅನೀಲ ಧರಿಯಣ್ಣವರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ 8ನೇ ವಾರ್ಡಿನ ಅನ್ನಪೂರ್ಣ ಸಿದ್ದಪ್ಪ ಯಲಿಗಾರ , ಉಪಾಧ್ಯಕ್ಷರಾಗಿ 20ನೇ ವಾರ್ಡಿನ ಕಾಶವ್ವ ಬಸಪ್ಪ ಮಳಗಿ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಬಿಜೆಪಿಗರೇ ಮತ್ತೆ ಅಧಿಕಾರದ ಗದ್ದುಗೆ ಏರಿದರು.</p>.<p>ಎರಡು ಸ್ಥಾನಕ್ಕೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಶ್ರೀಶೈಲ ತಳವಾರ ಅವರು ಅಧ್ಯಕ್ಷ, ಉಪಾಧ್ಯಕ್ಷರನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅಭಿನಂದಿಸಿದರು.</p>.<p>ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ‘ಅಭಿವೃದ್ಧಿ ಪರ ಆಡಳಿತ ನಡೆಸಬೇಕು. ಪಟ್ಟಣದ ಪ್ರತಿ ವಾರ್ಡಿನಲ್ಲೂ ಸಂಚರಿಸಿ ಸಮಸ್ಯೆಗಳನ್ನು ಆಲಿಸಬೇಕು. ಇಲ್ಲಿ 25 ವರ್ಷಗಳಿಂದ ಸುದೀರ್ಘ ಅವಧಿಯ ಆಡಳಿತವನ್ನು ಬಿಜೆಪಿ ನಡೆಸುತ್ತಾ ಬಂದಿದೆ’ ಎಂದರು.</p>.<p>‘ನನ್ನ ಹಿಂದಿನ ಅಧಿಕಾರದ ಅವಧಿಯಲ್ಲಿ ನಗರ ಅಭಿವೃದ್ಧಿಯಾಗಿದೆ. ಉಳಿದ ಅಭಿವೃದ್ಧಿ ಕೆಲಸ ಪೂರ್ಣಗೊಳಿಸಬೇಕು. ಇದೀಗ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಅನುದಾನ ಬಂದಿಲ್ಲ. ಇದರ ನಡುವೆಯೂ ಪಟ್ಟಣವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಮುಖರಾದ ಎಸ್.ಆರ್. ಪಾಟೀಲ, ಬಸು ಪಾಟೀಲ, ಎ.ಎಂ.ಹುಡೇದ, ಸಂಭಾಜಿ ಕಾಶೀದ, ಶಿವಾನಂದ ಮುತವಾಡ, ಶಂಕರ ಪಲ್ಟನಕರ, ಅನೀಲ ಧರಿಯಣ್ಣವರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>