<p><strong>ಗದಗ: </strong>ಬಿಜೆಪಿ ಕಾರ್ಯಕರ್ತನ ಬೈಕ್ ತಡೆದು ವಿಚಾರಿಸಿದ್ದಕ್ಕೆ, ಬೆಟಗೇರಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರು ಸಸ್ಪೆಂಡ್ ಆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಮೇ 17ರಂದು ಬೆಟಗೇರಿಯ ಟೆಂಗಿನಕಾಯಿ ಬಜಾರ್ನಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಮೂಲಿಮನಿ ಅವರು ಗಜೇಂದ್ರಗಡದ ವ್ಯಕ್ತಿಯೊಬ್ಬನ ಬೈಕ್ ತಡೆದು, ಪ್ರಶ್ನಿಸಿದ್ದಾರೆ. ಆತ ನೇರವಾಗಿ ಶಾಸಕ ಕಳಕಪ್ಪ ಬಂಡಿ ಅವರಿಗೆ ಕರೆ ಮಾಡಿ, ಮಾತನಾಡುವಂತೆ ಎಎಸ್ಐಗೆ ಕೊಟ್ಟಿದ್ದಾನೆ. ಈ ವೇಳೆ ಶಾಸಕರ ಜತೆಗೆ ಒರಟಾಗಿ ಮಾತನಾಡಿದ ಕಾರಣ ಅವರು ಮೇಲಧಿಕಾರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.</p>.<p>‘ಎಎಸ್ಐ ಮೂಲಿಮನಿ ಅವರ ಮೇಲೆ ಸಾರ್ವಜನಿಕರಿಂದಲೂ ದೂರು ಬಂದಿದ್ದವು. ಹೂವು, ತರಕಾರಿ ಗಾಡಿಗಳನ್ನು ಹಿಡಿದು ರೈತರಿಗೆ ತೊಂದರೆ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಬೈಕ್ ಹಿಡಿದ ವಿಚಾರವಾಗಿ ಮೇ 17ರಂದು ಶಾಸಕರ ಜತೆಗೆ ಕೂಡ ಒರಟಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರ ಮೇಲೆ ಬೆಟಗೇರಿ ಠಾಣೆಯ ಪಿಎಸ್ಐ ರಿಪೋರ್ಟ್ ನೀಡಿದ್ದರು. ಆದ್ದರಿಂದ ಎಎಸ್ಐ ಮೂಲಿಮನಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ’ ಎಂದು ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಬಿಜೆಪಿ ಕಾರ್ಯಕರ್ತನ ಬೈಕ್ ತಡೆದು ವಿಚಾರಿಸಿದ್ದಕ್ಕೆ, ಬೆಟಗೇರಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರು ಸಸ್ಪೆಂಡ್ ಆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಮೇ 17ರಂದು ಬೆಟಗೇರಿಯ ಟೆಂಗಿನಕಾಯಿ ಬಜಾರ್ನಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಮೂಲಿಮನಿ ಅವರು ಗಜೇಂದ್ರಗಡದ ವ್ಯಕ್ತಿಯೊಬ್ಬನ ಬೈಕ್ ತಡೆದು, ಪ್ರಶ್ನಿಸಿದ್ದಾರೆ. ಆತ ನೇರವಾಗಿ ಶಾಸಕ ಕಳಕಪ್ಪ ಬಂಡಿ ಅವರಿಗೆ ಕರೆ ಮಾಡಿ, ಮಾತನಾಡುವಂತೆ ಎಎಸ್ಐಗೆ ಕೊಟ್ಟಿದ್ದಾನೆ. ಈ ವೇಳೆ ಶಾಸಕರ ಜತೆಗೆ ಒರಟಾಗಿ ಮಾತನಾಡಿದ ಕಾರಣ ಅವರು ಮೇಲಧಿಕಾರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.</p>.<p>‘ಎಎಸ್ಐ ಮೂಲಿಮನಿ ಅವರ ಮೇಲೆ ಸಾರ್ವಜನಿಕರಿಂದಲೂ ದೂರು ಬಂದಿದ್ದವು. ಹೂವು, ತರಕಾರಿ ಗಾಡಿಗಳನ್ನು ಹಿಡಿದು ರೈತರಿಗೆ ತೊಂದರೆ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಬೈಕ್ ಹಿಡಿದ ವಿಚಾರವಾಗಿ ಮೇ 17ರಂದು ಶಾಸಕರ ಜತೆಗೆ ಕೂಡ ಒರಟಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರ ಮೇಲೆ ಬೆಟಗೇರಿ ಠಾಣೆಯ ಪಿಎಸ್ಐ ರಿಪೋರ್ಟ್ ನೀಡಿದ್ದರು. ಆದ್ದರಿಂದ ಎಎಸ್ಐ ಮೂಲಿಮನಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ’ ಎಂದು ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>