ಪತ್ರಕರ್ತರಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ಬಂದು ಕುಳಿತಿದ್ದ ಅವನನ್ನು ವಾರ್ತಾ ಇಲಾಖೆ ಸಿಬ್ಬಂದಿ, ‘ಪತ್ರಕರ್ತರಿಗೆ ಕೂರಲು ಅವಕಾಶ ಮಾಡಿಕೊಡಿ’ ಅಂತ ಮನವಿ ಮಾಡಿದ್ದಕ್ಕೆ ಆತ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಮುಂದಾದ. ಆಗ ಅಲ್ಲಿದ್ದ ಪತ್ರಕರ್ತರೆಲ್ಲರೂ ಗುತ್ತಿಗೆದಾರರ ವಿರುದ್ಧ ತಿರುಗಿ ಬಿದ್ದರು. ಆದರೂ, ಆತ ವಾರ್ತಾ ಇಲಾಖೆ ಸಿಬ್ಬಂದಿ ಜತೆಗೆ ಮಾತಿನ ಚಕಮಕಿ ನಡೆಸಿ, ಅವರ ಭುಜ ಹಿಡಿದ ದೂಕಿದ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.