ಗದಗ: ಹಾವೇರಿಯ ಗಳಗನಾಥ ಮತ್ತು ರಾಜಪುರೋಹಿತ ಪ್ರತಿಷ್ಠಾನ ನೀಡುವ ‘ಗಳಗನಾಥ ಪ್ರಶಸ್ತಿ’ಗೆ ಲೇಖಕ ವಸುಧೇಂದ್ರ ಹಾಗೂ ‘ರಾಜಪುರೋಹಿತ ಸಂಶೋಧಕ ಪ್ರಶಸ್ತಿ’ಗೆ ಪ್ರೊ. ಲಕ್ಷ್ಮಣ ತೆಲಗಾವಿ ಆಯ್ಕೆಯಾಗಿದ್ದಾರೆ.
ಗದಗ ನಗರದ ಎಂಪಿಎಂಸಿ ಆವರಣದಲ್ಲಿರುವ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಅ.10ರಂದು ಸಂಜೆ 4.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಗಳಗನಾಥ ಮತ್ತು ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ದುಷ್ಯಂತ ನಾಡಗೌಡ ತಿಳಿಸಿದ್ದಾರೆ.