ನರಗುಂದ: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಉದ್ದೇಶ ಸರ್ಕಾರವನ್ನು ರೈತರ ಮನೆ ಬಾಗಿಲಿಗೆ ಕರೆತರುವುದೇ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಈ ಕಾರ್ಯಕ್ರಮ ಕಳೆದ ನವಂಬರ್ 14ರಿಂದ ಆರಂಭಗೊಂಡಿದ್ದು, ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ನಡೆಯುತ್ತಿರುವ 11ನೇ ಕಾರ್ಯಕ್ರಮವಾಗಿದೆ. ನವಂಬರ್ 14ರಂದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ ಎಂದರು.
ಈ ಕಾರ್ಯಕ್ರಮ ಪ್ರತಿ ಜಿಲ್ಲೆ, ತಾಲ್ಲೂಕಿನ ಪ್ರಗತಿಪರ ರೈತರ ಹೊಲಗಳಿಗೆ ನೇರವಾಗಿ ಭೇಟಿ ನೀಡಿ, ಅವರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಲ್ಲಿ ವೈಜ್ಞಾನಿಕ ತಾಂತ್ರಿಕತೆಯನ್ನು ಹೇಗೆ ಅಳವಡಿಸಬೇಕು ಎಂಬುದನ್ನು ತಿಳಿಸುವುದೇ ಆಗಿದೆ ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡ್ರ, ಪುರಸಭೆ ಅಧ್ಯಕ್ಷೆ ಭಾವನಾ ಪಾಟೀಲ ಇದ್ದರು.