<p>ಮುಂಡರಗಿ: ‘ಬಾದಾಮಿ ತಾಲ್ಲೂಕಿನ ಬನಶಂಕರಿಯಲ್ಲಿ ಮೇ 9, 10ರಂದು ರಾಜ್ಯ ಮಟ್ಟದ ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 36ನೇ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಜಿಲ್ಲಾ ದೇವಾಂಗ ಸಮಾಜದ ಅದ್ಯಕ್ಷ ದಶರಥರಾಜು ಕೊಳ್ಳಿ ಹೇಳಿದರು.</p>.<p>ತಾಲ್ಲೂಕು ದೇವಾಂಗ ಸಮಾಜ, ಬನಶಂಕರಿ ದೇವಸ್ಥಾನ ಟ್ರಸ್ಟ್ ಹಾಗೂ ತಾಲ್ಲೂಕು ಕಸಾಪ ಘಟಕಗಳು ಗುರುವಾರ ರಾತ್ರಿ ಇಲ್ಲಿಯ ದೇವಾಂಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯನವರ ಜೀವನ ಸಾಧನೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದ ಜನರು ಅಸಂಘಟಿತರಾಗಿದ್ದು, ಮೊದಲು ನಾವೆಲ್ಲ ಸಂಘಟಿತರಾಗಬೇಕು. ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ನೀಡಬೇಕು. ಸಮಾಜದ ಉತ್ತಮ ಪ್ರಜೆಗಳಾಗಿ ಬಾಳುವುದನ್ನು ಕಲಿಸಬೇಕು ಎಂದು ಸಲಹೆ ನೀಡಿದರು.</p>.<p>ಉಪ ತಹಶೀಲ್ದಾರ್ ಎಸ್.ಎಸ್.ಬಿಚ್ಚಾಲಿ ಮಾತನಾಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಅದ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, 12ನೇ ಶತಮಾನಕ್ಕಿಂತಲೂ ಪೂರ್ವದಲ್ಲಿ ಜನಿಸಿದ ದೇವರ ದಾಸಿಮಯ್ಯ ಬಸವಾದಿ ಶರಣರಿಗೆ ವಚನ ಸಾಹಿತ್ಯವನ್ನು ಪರಿಚಯಿಸಿದನು ಎಂದರು.</p>.<p>ಉಮಾಪತಿ ಅಕ್ಕಸಾಲಿ ಅವರು ದೇವರ ದಾಸಿಮಯ್ಯನವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು. ಬನಶಂಕರಿ ದೇವಸ್ಥಾನ ಟ್ರಷ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಗುಬ್ಬಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಶಂಕ್ರಮ್ಮ ಹಡಗಲಿ ಮಾತನಾಡಿದರು.</p>.<p>ಅವಿನಾಶ ಗೋಟಕ್ಕಿಂಡಿ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸನಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಗುಗ್ಗರಿ ಕೊನೆಯಲ್ಲಿ ವಂದಿಸಿದರು.</p>.<p>ಚಂದ್ರಮತಿ ಗದ್ದಿ, ರಾಘವೇಂದ್ರ ಕೊಪ್ಪಳ, ನಾರಾಯಣಪ್ಪ ಗುಬ್ಬಿ, ನಾಗರಾಜ ಭೂತಾನವರ, ಕೃಷ್ಣಮೂರ್ತಿ ದೂತರ್ಗಾವಿ, ಶಂಕ್ರಪ್ಪ ಕುಳ್ಳಿ, ಸಂಗಮೇಶ ನಿಡಗುಂದಿ, ಬಸನಗೌಡ ಮುನ್ನೊಳ್ಳಿ, ಗ್ಯಾನಪ್ಪ ಗುಗ್ಗುರಿ, ಬಸವರಾಜ ಗೋದಿ, ಮಲ್ಲಪ್ಪ ದೊತ್ರಗಾವಿ, ಲೋಕಪ್ಪ ದೂತರಗಾವಿ, ಕೇಶಪ್ಪ ಹುಳ್ಳಿ, ಸಂಜೀವ್ ರಿತ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-23-665432423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಬಾದಾಮಿ ತಾಲ್ಲೂಕಿನ ಬನಶಂಕರಿಯಲ್ಲಿ ಮೇ 9, 10ರಂದು ರಾಜ್ಯ ಮಟ್ಟದ ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 36ನೇ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಜಿಲ್ಲಾ ದೇವಾಂಗ ಸಮಾಜದ ಅದ್ಯಕ್ಷ ದಶರಥರಾಜು ಕೊಳ್ಳಿ ಹೇಳಿದರು.</p>.<p>ತಾಲ್ಲೂಕು ದೇವಾಂಗ ಸಮಾಜ, ಬನಶಂಕರಿ ದೇವಸ್ಥಾನ ಟ್ರಸ್ಟ್ ಹಾಗೂ ತಾಲ್ಲೂಕು ಕಸಾಪ ಘಟಕಗಳು ಗುರುವಾರ ರಾತ್ರಿ ಇಲ್ಲಿಯ ದೇವಾಂಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯನವರ ಜೀವನ ಸಾಧನೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದ ಜನರು ಅಸಂಘಟಿತರಾಗಿದ್ದು, ಮೊದಲು ನಾವೆಲ್ಲ ಸಂಘಟಿತರಾಗಬೇಕು. ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ನೀಡಬೇಕು. ಸಮಾಜದ ಉತ್ತಮ ಪ್ರಜೆಗಳಾಗಿ ಬಾಳುವುದನ್ನು ಕಲಿಸಬೇಕು ಎಂದು ಸಲಹೆ ನೀಡಿದರು.</p>.<p>ಉಪ ತಹಶೀಲ್ದಾರ್ ಎಸ್.ಎಸ್.ಬಿಚ್ಚಾಲಿ ಮಾತನಾಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಅದ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, 12ನೇ ಶತಮಾನಕ್ಕಿಂತಲೂ ಪೂರ್ವದಲ್ಲಿ ಜನಿಸಿದ ದೇವರ ದಾಸಿಮಯ್ಯ ಬಸವಾದಿ ಶರಣರಿಗೆ ವಚನ ಸಾಹಿತ್ಯವನ್ನು ಪರಿಚಯಿಸಿದನು ಎಂದರು.</p>.<p>ಉಮಾಪತಿ ಅಕ್ಕಸಾಲಿ ಅವರು ದೇವರ ದಾಸಿಮಯ್ಯನವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು. ಬನಶಂಕರಿ ದೇವಸ್ಥಾನ ಟ್ರಷ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಗುಬ್ಬಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಶಂಕ್ರಮ್ಮ ಹಡಗಲಿ ಮಾತನಾಡಿದರು.</p>.<p>ಅವಿನಾಶ ಗೋಟಕ್ಕಿಂಡಿ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸನಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಗುಗ್ಗರಿ ಕೊನೆಯಲ್ಲಿ ವಂದಿಸಿದರು.</p>.<p>ಚಂದ್ರಮತಿ ಗದ್ದಿ, ರಾಘವೇಂದ್ರ ಕೊಪ್ಪಳ, ನಾರಾಯಣಪ್ಪ ಗುಬ್ಬಿ, ನಾಗರಾಜ ಭೂತಾನವರ, ಕೃಷ್ಣಮೂರ್ತಿ ದೂತರ್ಗಾವಿ, ಶಂಕ್ರಪ್ಪ ಕುಳ್ಳಿ, ಸಂಗಮೇಶ ನಿಡಗುಂದಿ, ಬಸನಗೌಡ ಮುನ್ನೊಳ್ಳಿ, ಗ್ಯಾನಪ್ಪ ಗುಗ್ಗುರಿ, ಬಸವರಾಜ ಗೋದಿ, ಮಲ್ಲಪ್ಪ ದೊತ್ರಗಾವಿ, ಲೋಕಪ್ಪ ದೂತರಗಾವಿ, ಕೇಶಪ್ಪ ಹುಳ್ಳಿ, ಸಂಜೀವ್ ರಿತ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-23-665432423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>