ಪ್ರತಿ ಬಾರಿ ನರಗುಂದ ಬಂದ್ ನಡೆದಾಗ ರೈತರು, ಹೋರಾಟಗಾರರು ಬಲವಂತವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿ, ಅಂಗಡಿ–ಮುಂಗಟ್ಟುಗಳ ಬಾಗಿಲು ಹಾಕಿಸುತ್ತಿದ್ದರು. ಆದರೆ, ಈ ಬಾರಿ ಪೊಲೀಸರೇ ಮುಂದೆ ನಿಂತು ಹೋರಾಟಗಾರರ ಕೆಲಸವನ್ನು ಮಾಡಿದರು. ತೆರೆದ ಅಂಗಡಿಗಳನ್ನೂ ಪೊಲೀಸರು ಬಂದ್ ಮಾಡಿಸುತ್ತಿದ್ದ ದೃಶ್ಯ ಪಟ್ಟಣದಲ್ಲಿ ಕಂಡುಬಂತು.