ಮಂಗಳವಾರ, 10 ಮಾರ್ಚ್ 2026
×
ADVERTISEMENT

ಶಿಂಗಟಾಲೂರ ಏತ ನೀರಾವರಿ ಯೋಜನೆಯ ಬ್ಯಾರೇಜ್ ಭರ್ತಿ: ಹೆಚ್ಚುವರಿ ನೀರು ಹೊರಕ್ಕೆ

ಅವಳಿ ನಗರದ ಜನರ ಕುಡಿಯುವ ನೀರಿನ ಬವಣೆ ನೀಗಿಸಿದ ತುಂಗಭದ್ರೆ
Published : 31 ಮೇ 2024, 5:02 IST
Last Updated : 31 ಮೇ 2024, 5:02 IST
ADVERTISEMENT
ಫಾಲೋ ಮಾಡಿ
Comments
ಹಮ್ಮಿಗಿ ಬ್ಯಾರೇಜ್‌ನಲ್ಲಿ ಸಾಕಷ್ಟು ಹೊಸನೀರು ಸಂಗ್ರಹವಾಗಿದ್ದು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಮಳೆಯಾದಂತೆಲ್ಲ ಹೆಚ್ಚು ನೀರು ಹರಿದು ಬರಲಿದೆ
–ಐ.ಪ್ರಕಾಶ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿ ಮುಂಡರಗಿ
ಗ್ರಾಮ ಸ್ಥಳಾಂತರಕ್ಕೆ ಆಗ್ರಹ
ಸದ್ಯ ಬ್ಯಾರೇಜ್‌ಗೆ ಸಾಕಷ್ಟು ಪ್ರಮಾಣದ ನೀರು ಹರಿದು ಬರುತ್ತಿದ್ದು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದರೆ ಇನ್ನೂ ದೊಡ್ಡ ಪ್ರಮಾಣದ ಹೊಸನೀರು ಹರಿದು ಬರಲಿದೆ. ಬ್ಯಾರೇಜ್‌ನಲ್ಲಿ ಗರಿಷ್ಠ 3.12 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಿಕೊಳ್ಳಬಹುದಾಗಿದೆ. ಆದರೆ ಬ್ಯಾರೇಜ್‌ನ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ ತಾಲ್ಲೂಕಿನ ಗುಮ್ಮಗೋಳ ಬಿದರಳ್ಳಿ ಹಾಗೂ ವಿಠಲಾಪೂರ ಗ್ರಾಮಗಳನ್ನು ಸಮರ್ಪಕವಾಗಿ ಸ್ಥಳಾಂತರಿಸದೇ ಇರುವುದರಿಂದ ಸದ್ಯ ಬ್ಯಾರೇಜ್‌ನಲ್ಲಿ ಕೇವಲ 1.9 ಟಿಎಂಸಿ ಅಡಿ ನೀರನ್ನು ಮಾತ್ರ ಸಂಗ್ರಹಿಸಿಕೊಳ್ಳಬಹುದಾಗಿದೆ. ಮುಳುಗಡೆ ಗ್ರಾಮಗಳನ್ನು ಸ್ಥಳಾಂತರಿಸಿದರೆ ವರ್ಷದುದ್ದಕ್ಕೂ ಜಿಲ್ಲೆಯ ಜನತೆಯ ಶುದ್ಧ ಕುಡಿಯುವ ನೀರಿನ ಬವಣೆ ಸುಲಭವಾಗಿ ನಿವಾರಿಸಬಹುದಾಗಿದೆ. ಜತೆಗೆ ಜಿಲ್ಲೆಯ ರೈತರ ಜಮೀನುಗಳಿಗೂ ಬೇಸಿಗೆಯಲ್ಲಿ ನೀರು ಹರಿಸಬಹುದಾಗಿದೆ. ಮುಳುಗಡೆ ಗ್ರಾಮಗಳನ್ನು ಸ್ಥಳಾಂತರಿಸಬೇಕು ಎಂದು ತಾಲ್ಲೂಕಿನ ರೈತ ಮುಖಂಡರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT