ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಸ್ವಾಗತಿಸಿದ ಮಹಿಳಾ ಕಾರ್ಯಕರ್ತೆಯರು
ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಸವಾಲಾಗಿ ತೆಗೆದುಕೊಂಡಿದ್ದು ಮುಂಬರುವ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ. ಗದಗ ನಗರವನ್ನು ಔದ್ಯೋಗಿಕ ನಗರವನ್ನು ಮಾಡಲು ಕ್ರಮ ಕೈಗೊಳ್ಳುತ್ತೇನೆ
ಬಸವರಾಜ ಬೊಮ್ಮಾಯಿ ಸಂಸದ
ಕಳಸ ಬಂಡೂರಿ ಹೋರಾಟದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಪಾಲು ಇರುವುದರಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗಲಿದೆ
ಸಿ.ಸಿ.ಪಾಟೀಲ ಶಾಸಕ
ಬೊಮ್ಮಾಯಿಗೆ ಅದ್ಧೂರಿ ಸ್ವಾಗತ
ಗದಗ ಜಿಲ್ಲಾ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಹೂಮಳೆ ಸುರಿಸಿ ಸ್ವಾಗತ ಕೋರಿದರು. ಗದಗ ವಿಧಾನಸಭಾ ಕ್ಷೇತ್ರದಿಂದ 16 ಸಾವಿರ ಮತಗಳ ಲೀಡ್ ನೀಡಿ ನನ್ನನ್ನು ಸಂಸದನನ್ನಾಗಿಸಿದ ಗದಗ ಜಿಲ್ಲೆಯ ಸಮಸ್ತ ತಾಯಂದಿರು ರೈತರು ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸುವೆ. ನೀವು ನೀಡಿದ ಅಮೂಲ್ಯವಾದ ಮತಕ್ಕೆ ಗೌರವ ತರುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ‘ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗಾಗಿ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಎಲ್ಲರನ್ನೂ ಒಂದುಗೂಡಿಸಿ ಮುನ್ನಡೆಯುವುದು ಸುಲಭವಾದ ಮಾತಲ್ಲ. ಆದರೆ ನರೇಂದ್ರ ಮೋದಿ ದೃಢಸಂಕಲ್ಪದೊಂದಿಗೆ ದಿಟ್ಟ ಹೆಜ್ಜೆನಿಟ್ಟಿದ್ದಾರೆ’ ಎಂದು ಹೇಳಿದರು.