<p><strong>ಗದಗ</strong>: ‘ಮನನೊಂದು ಮಕ್ಕಳ ಸಮೇತ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಉಮಾದೇವಿ ಅವರ ನೋವಿಗೆ ಸ್ಪಂದಿಸುವುದರ ಜೊತೆಗೆ ಅವರ ಮೂವರು ಮಕ್ಕಳ ಶೈಕ್ಷಣಿಕ ಖರ್ಚು, ವೆಚ್ಚವನ್ನು ಅವ್ವ ಸೇವಾ ಟ್ರಸ್ಟ್ನಿಂದ ಭರಿಸಲಾಗುವುದು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>ಶನಿವಾರ ಗದಗ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಉಮಾದೇವಿ ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ‘ಶಿಕ್ಷಕರಾಗಿದ್ದ ಪತಿ ಸಂಗಪ್ಪ ಶೆಲ್ಲಿಕೇರಿ ನಾಲ್ಕು ತಿಂಗಳ ಹಿಂದೆ ಕೊರೊನಾದಿಂದ ಸಾವನ್ನಪ್ಪಿದ್ದು, ನಮಗೆಲ್ಲರಿಗೂ ನೋವು ತಂದಿದೆ. ಆ ನೋವು ಉಮಾದೇವಿ ಅವರಿಗೆ ಇರುವುದು ಸಹಜ’ ಎಂದರು.</p>.<p>‘ಕಷ್ಟ ಬಂದಾಗ ಧೈರ್ಯದಿಂದ ಎದುರಿಸಬೇಕು. ಯಾವುದೋ ಕಾರಣಕ್ಕೆ ದುಡುಕಿನ ನಿರ್ಧಾರ ಸರಿಯಲ್ಲ. ನನ್ನ ಸಹೋದರಿ ಸಮಾನರಾದ ನೀವು ಯಾವುದಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದರು.</p>.<p>ಬಸವರಾಜ ಹೊರಟ್ಟಿ ಅವರ ಮಾತಿಗೆ ಸ್ಪಂದಿಸಿದ ಉಮಾದೇವಿ, ‘ಮುಂದೆ ಇಂತಹ ತಪ್ಪು ಮಾಡುವುದಿಲ್ಲ. ದುಡುಕಿನ ನಿರ್ಧಾರದಿಂದ ಅವಘಡ ಸಂಭವಿಸಿತು. ಆ ಪಾಪಪ್ರಜ್ಞೆ ಕಾಡುತ್ತಿದೆ. ಮಕ್ಕಳೊಂದಿಗೆ ಜೀವನ ನಡೆಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಮನನೊಂದು ಮಕ್ಕಳ ಸಮೇತ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಉಮಾದೇವಿ ಅವರ ನೋವಿಗೆ ಸ್ಪಂದಿಸುವುದರ ಜೊತೆಗೆ ಅವರ ಮೂವರು ಮಕ್ಕಳ ಶೈಕ್ಷಣಿಕ ಖರ್ಚು, ವೆಚ್ಚವನ್ನು ಅವ್ವ ಸೇವಾ ಟ್ರಸ್ಟ್ನಿಂದ ಭರಿಸಲಾಗುವುದು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>ಶನಿವಾರ ಗದಗ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಉಮಾದೇವಿ ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ‘ಶಿಕ್ಷಕರಾಗಿದ್ದ ಪತಿ ಸಂಗಪ್ಪ ಶೆಲ್ಲಿಕೇರಿ ನಾಲ್ಕು ತಿಂಗಳ ಹಿಂದೆ ಕೊರೊನಾದಿಂದ ಸಾವನ್ನಪ್ಪಿದ್ದು, ನಮಗೆಲ್ಲರಿಗೂ ನೋವು ತಂದಿದೆ. ಆ ನೋವು ಉಮಾದೇವಿ ಅವರಿಗೆ ಇರುವುದು ಸಹಜ’ ಎಂದರು.</p>.<p>‘ಕಷ್ಟ ಬಂದಾಗ ಧೈರ್ಯದಿಂದ ಎದುರಿಸಬೇಕು. ಯಾವುದೋ ಕಾರಣಕ್ಕೆ ದುಡುಕಿನ ನಿರ್ಧಾರ ಸರಿಯಲ್ಲ. ನನ್ನ ಸಹೋದರಿ ಸಮಾನರಾದ ನೀವು ಯಾವುದಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದರು.</p>.<p>ಬಸವರಾಜ ಹೊರಟ್ಟಿ ಅವರ ಮಾತಿಗೆ ಸ್ಪಂದಿಸಿದ ಉಮಾದೇವಿ, ‘ಮುಂದೆ ಇಂತಹ ತಪ್ಪು ಮಾಡುವುದಿಲ್ಲ. ದುಡುಕಿನ ನಿರ್ಧಾರದಿಂದ ಅವಘಡ ಸಂಭವಿಸಿತು. ಆ ಪಾಪಪ್ರಜ್ಞೆ ಕಾಡುತ್ತಿದೆ. ಮಕ್ಕಳೊಂದಿಗೆ ಜೀವನ ನಡೆಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>