<p><strong>ಗಜೇಂದ್ರಗಡ:</strong> ತಾಲ್ಲೂಕಿನ ತಾಂಡಾ ನಿವಾಸಿಗಳಿಗೆ ಮೂಲಸೌಲಭ್ಯಗಳ ಪೂರೈಕೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ತಾಂಡಾ ನಿವಾಸಿಗಳು ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ಗಜೇಂದ್ರಗಡ ತಾಲ್ಲೂಕು ಪಂಚಾಯಿತಿ ಇಒ ಬುಧವಾರ ಲಕ್ಕಲಕಟ್ಟಿ ತಾಂಡಾಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.</p>.<p>ಭೇಟಿ ವೇಳೆ ಲಕ್ಕಲಕಟ್ಟಿ ತಾಂಡಾದಲ್ಲಿ 50ಕ್ಕೂ ಅಧಿಕ ಕುಟುಂಬಗಳಿದ್ದು, ತಾಂಡಾದಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಗ್ರಾಮಸ್ಥರು ಮನವಿ ಮಾಡಿದರು.</p>.<p>ಮನವಿಗೆ ಸ್ಪಂದಿಸಿದ ಇಒ, ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿರಂತರ ವಿದ್ಯುತ್ ಸಂಪರ್ಕ ಇಲ್ಲದೇ ತಾಂಡಾ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.</p>.<p>ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಹಾಗೂ ತಾಂಡಾದಲ್ಲಿ ಸ್ವಚ್ಛತೆ ಕಾರ್ಯ ನಿರಂತರವಾಗಿ ಕೈಗೊಂಡು ತಾಂಡಾದ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಿಬ್ಬಂದಿಗೆ ತಾಕೀತು ಮಾಡಿದರು.</p>.<p>ಲಕ್ಕಲಕಟ್ಟಿ ಗ್ರಾಮ ಪಂಚಾಯಿತಿ ಪಿಡಿಒ ಶಿವಯೋಗಿ ರಿತ್ತಿ, ಕಾರ್ಯದರ್ಶಿ ಶರಣಪ್ಪ ಮೇಟಿ, ತಾಂಡಾ ರೋಜಗಾರ ಮಿತ್ರ ಸಕ್ಕುಬಾಯಿ ರಾಥೋಡ, ಗ್ರಾಮ ಕಾಯಕ ಮಿತ್ರ ಸುಜಾತ ಮ್ಯಾಗೇರಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.</p>.<div><blockquote>ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಲು ಕೂಲಿಕಾರರಿಗೆ ಕೇಂದ್ರ ಸರ್ಕಾರ ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅ.31ರೊಳಗಾಗಿ ತಾಂಡಾದ ನರೇಗಾ ಕೂಲಿಕಾರರೆಲ್ಲರೂ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವೇ ನರೇಗಾ ಉದ್ಯೋಗ ಚೀಟಿ ರದ್ದಾಗುವುದು</blockquote><span class="attribution">ಚಂದ್ರಶೇಖರ ಬಿ. ಕಂದಕೂರ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ತಾಲ್ಲೂಕಿನ ತಾಂಡಾ ನಿವಾಸಿಗಳಿಗೆ ಮೂಲಸೌಲಭ್ಯಗಳ ಪೂರೈಕೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ತಾಂಡಾ ನಿವಾಸಿಗಳು ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ಗಜೇಂದ್ರಗಡ ತಾಲ್ಲೂಕು ಪಂಚಾಯಿತಿ ಇಒ ಬುಧವಾರ ಲಕ್ಕಲಕಟ್ಟಿ ತಾಂಡಾಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.</p>.<p>ಭೇಟಿ ವೇಳೆ ಲಕ್ಕಲಕಟ್ಟಿ ತಾಂಡಾದಲ್ಲಿ 50ಕ್ಕೂ ಅಧಿಕ ಕುಟುಂಬಗಳಿದ್ದು, ತಾಂಡಾದಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಗ್ರಾಮಸ್ಥರು ಮನವಿ ಮಾಡಿದರು.</p>.<p>ಮನವಿಗೆ ಸ್ಪಂದಿಸಿದ ಇಒ, ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿರಂತರ ವಿದ್ಯುತ್ ಸಂಪರ್ಕ ಇಲ್ಲದೇ ತಾಂಡಾ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.</p>.<p>ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಹಾಗೂ ತಾಂಡಾದಲ್ಲಿ ಸ್ವಚ್ಛತೆ ಕಾರ್ಯ ನಿರಂತರವಾಗಿ ಕೈಗೊಂಡು ತಾಂಡಾದ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಿಬ್ಬಂದಿಗೆ ತಾಕೀತು ಮಾಡಿದರು.</p>.<p>ಲಕ್ಕಲಕಟ್ಟಿ ಗ್ರಾಮ ಪಂಚಾಯಿತಿ ಪಿಡಿಒ ಶಿವಯೋಗಿ ರಿತ್ತಿ, ಕಾರ್ಯದರ್ಶಿ ಶರಣಪ್ಪ ಮೇಟಿ, ತಾಂಡಾ ರೋಜಗಾರ ಮಿತ್ರ ಸಕ್ಕುಬಾಯಿ ರಾಥೋಡ, ಗ್ರಾಮ ಕಾಯಕ ಮಿತ್ರ ಸುಜಾತ ಮ್ಯಾಗೇರಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.</p>.<div><blockquote>ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಲು ಕೂಲಿಕಾರರಿಗೆ ಕೇಂದ್ರ ಸರ್ಕಾರ ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅ.31ರೊಳಗಾಗಿ ತಾಂಡಾದ ನರೇಗಾ ಕೂಲಿಕಾರರೆಲ್ಲರೂ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವೇ ನರೇಗಾ ಉದ್ಯೋಗ ಚೀಟಿ ರದ್ದಾಗುವುದು</blockquote><span class="attribution">ಚಂದ್ರಶೇಖರ ಬಿ. ಕಂದಕೂರ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>