ತಮ್ಮ ಸೇವಾವಧಿಯಲ್ಲಿ ವೇತನವನ್ನು ಮಕ್ಕಳ ಕಲ್ಯಾಣಕ್ಕೆ ಬಳಸಿದ್ದ ಅವರು, ನಿವೃತ್ತಿ ನಂತರವೂ ಬಂದ ಹಣವನ್ನು ವಿದ್ಯಾರ್ಥಿಗಳಿಗಾಗಿಯೇ ಬಳಸುತ್ತಿದ್ದರು. ಲಿಂಗೈಕ್ಯ ಗದುಗಿನ ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರು ಬಿ.ಜಿ. ಅಣ್ಣಿಗೇರಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ, ಅವರ ಶಿಷ್ಯ ಬಳಗದಿಂದ ದೇಣಿಗೆ ಸಂಗ್ರಹಿಸಿ, ಆ ಮೂಲಕ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಯೋಜನೆ ರೂಪಿಸಿದ್ದರು.