ನರೇಗಲ್: ‘ವಿಶ್ವಗುರು ಭಾರತ’ ಸಿದ್ಧಾಂತದ ಆಧಾರದ ಮೇಲೆ ಹಾಗೂ ಬಡವರ, ದೀನದಲಿತರ ಏಳಿಗೆಗಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ದೇಶದ ಒಗ್ಗಟ್ಟನ್ನು ಮತ್ತಷ್ಟು ಸದೃಢಗೊಳಿಸುತ್ತಿದೆ ಎಂದು ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.
ಸಮೀಪದ ಜಕ್ಕಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶಾಭಿಮಾನದ ಪಕ್ಷವನ್ನು ಕಟ್ಟುವಲ್ಲಿ ಅನೇಕ ವರ್ಷಗಳಿಂದ ಹಿರಿಯ ನಾಯಕರು, ಕಾರ್ಯಕರ್ತರು ಮಾಡಿದ ಶ್ರಮ, ಹೋರಾಟ ಮತ್ತು ತ್ಯಾಗದ ಫಲದಿಂದ ಪಕ್ಷ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದರು.
‘ರೈತರಿಗಾಗಿ, ಮಹಿಳೆಯರಿಗಾಗಿ, ಬಡವರಿಗೆ, ದೀನದಲಿತರಿಗೆ ಹಾಗೂ ಸಮಗ್ರ ಭಾರತದ ಅಭಿವೃದ್ಧಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಿಳಿಸಬೇಕಿದೆ’ ಎಂದರು.
ನರೇಗಲ್ ಸಮೀಪದ ಜಕ್ಕಲಿ ಗ್ರಾಮದಲ್ಲಿ ಬಿಜೆಪಿ ಸ್ಥಾಪನಾ ದಿನವನ್ನು ಆಚರಣೆ ಮಾಡಲಾಯಿತು