<p><strong>ನರೇಗಲ್:</strong> ‘ವಿಶ್ವಗುರು ಭಾರತ’ ಸಿದ್ಧಾಂತದ ಆಧಾರದ ಮೇಲೆ ಹಾಗೂ ಬಡವರ, ದೀನದಲಿತರ ಏಳಿಗೆಗಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ದೇಶದ ಒಗ್ಗಟ್ಟನ್ನು ಮತ್ತಷ್ಟು ಸದೃಢಗೊಳಿಸುತ್ತಿದೆ ಎಂದು ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.</p>.<p>ಸಮೀಪದ ಜಕ್ಕಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ದೇಶಾಭಿಮಾನದ ಪಕ್ಷವನ್ನು ಕಟ್ಟುವಲ್ಲಿ ಅನೇಕ ವರ್ಷಗಳಿಂದ ಹಿರಿಯ ನಾಯಕರು, ಕಾರ್ಯಕರ್ತರು ಮಾಡಿದ ಶ್ರಮ, ಹೋರಾಟ ಮತ್ತು ತ್ಯಾಗದ ಫಲದಿಂದ ಪಕ್ಷ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದರು.</p>.<p>‘ರೈತರಿಗಾಗಿ, ಮಹಿಳೆಯರಿಗಾಗಿ, ಬಡವರಿಗೆ, ದೀನದಲಿತರಿಗೆ ಹಾಗೂ ಸಮಗ್ರ ಭಾರತದ ಅಭಿವೃದ್ಧಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಿಳಿಸಬೇಕಿದೆ’ ಎಂದರು.</p>.<p>ಶೇಖಪ್ಪ ಮಾರನಬಸರಿ, ಚನ್ನಬಸಪ್ಪ ಕೊಪ್ಪದ, ಬಸವರಾಜ ಶ್ಯಾಶೇಟ್ಟಿ, ಗುರುಪಾದ ವಾಲಿ, ಶರಣಪ್ಪ ಕೋರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ‘ವಿಶ್ವಗುರು ಭಾರತ’ ಸಿದ್ಧಾಂತದ ಆಧಾರದ ಮೇಲೆ ಹಾಗೂ ಬಡವರ, ದೀನದಲಿತರ ಏಳಿಗೆಗಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ದೇಶದ ಒಗ್ಗಟ್ಟನ್ನು ಮತ್ತಷ್ಟು ಸದೃಢಗೊಳಿಸುತ್ತಿದೆ ಎಂದು ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.</p>.<p>ಸಮೀಪದ ಜಕ್ಕಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ದೇಶಾಭಿಮಾನದ ಪಕ್ಷವನ್ನು ಕಟ್ಟುವಲ್ಲಿ ಅನೇಕ ವರ್ಷಗಳಿಂದ ಹಿರಿಯ ನಾಯಕರು, ಕಾರ್ಯಕರ್ತರು ಮಾಡಿದ ಶ್ರಮ, ಹೋರಾಟ ಮತ್ತು ತ್ಯಾಗದ ಫಲದಿಂದ ಪಕ್ಷ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದರು.</p>.<p>‘ರೈತರಿಗಾಗಿ, ಮಹಿಳೆಯರಿಗಾಗಿ, ಬಡವರಿಗೆ, ದೀನದಲಿತರಿಗೆ ಹಾಗೂ ಸಮಗ್ರ ಭಾರತದ ಅಭಿವೃದ್ಧಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಿಳಿಸಬೇಕಿದೆ’ ಎಂದರು.</p>.<p>ಶೇಖಪ್ಪ ಮಾರನಬಸರಿ, ಚನ್ನಬಸಪ್ಪ ಕೊಪ್ಪದ, ಬಸವರಾಜ ಶ್ಯಾಶೇಟ್ಟಿ, ಗುರುಪಾದ ವಾಲಿ, ಶರಣಪ್ಪ ಕೋರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>