<p><strong>ಗದಗ:</strong> ‘ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷಗಳನ್ನು ಹಣಿಯಲು ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ ಮಂಡಿಸಿ, ತುರ್ತು ಪರಿಸ್ಥಿತಿ ಹೇರಲು ಹೊರಟಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ಟೀಕಿಸಿದ್ದಾರೆ.</p>.<p>‘ದ್ವೇಷ ಭಾಷಣ ವಿಧೇಯಕವು ಪೊಲೀಸ್ ವ್ಯವಸ್ಥೆಯ ದುರುಪಯೋಗಕ್ಕೆ ದಾರಿ ಮಾಡಿಕೊಡಲಿದೆ. ಸಂದೇಶ, ವ್ಯಂಗ್ಯಚಿತ್ರ, ಲೇಖನವು ದ್ವೇಷಕ್ಕೆ ಪ್ರಚೋದನೆ ನೀಡುತ್ತದೆಂದು ನಿರ್ಧರಿಸುವ ಅಧಿಕಾರ ಕೆಳ ಹಂತದ ಪೊಲೀಸ್ ಅಧಿಕಾರಿಗೂ ಇರುತ್ತದೆ’ ಎಂದಿದ್ದಾರೆ.</p>.<p>‘ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಮಾತನಾಡುವ ಹಕ್ಕು ನೀಡಲಾಗಿದೆ. ಸಂವಿಧಾನದ ಪುಸ್ತಕ ಹಿಡಿದು, ಅದರ ರಕ್ಷಕನಂತೆ ಬಿಂಬಿಸಿಕೊಳ್ಳುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರದ್ದೇ ಸರ್ಕಾರ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ’ ಎಂದು ಆರೋಪಿಸಿದ್ದಾರೆ. </p>.<p>‘ದ್ವೇಷ ಭಾಷಣ ನಿಯಂತ್ರಿಸಲು ಈಗಾಗಲೇ ಸಾಕಷ್ಟು ಕಾನೂನುಗಳಿವೆ. ಬಲಿಷ್ಠ ಕಾನೂನುಗಳು ಇದ್ದರೂ, ಕಾಂಗ್ರೆಸ್ ಸರ್ಕಾರ ಹೊಸ ಮತ್ತು ಹೆಚ್ಚು ಕಠಿಣವಾದ ಕಾಯ್ದೆ ಜಾರಿಗೆ ತರಲು ಯತ್ನಿಸುವ ಅವಶ್ಯಕತೆ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ. </p>.<p>‘ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳ ಕರ್ತವ್ಯ. ಪ್ರತಿಭಟನೆ ಸಮಯದಲ್ಲಿ ಆಕ್ರೋಶದ ಮಾತುಗಳು ಬರುವುದು ಸಹಜ. ಇದನ್ನು ರಾಜ್ಯ ಸರ್ಕಾರ ಬಲವಾಗಿ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸರ್ಕಾರದ ನೀತಿ ಟೀಕಿಸುವ ಧ್ವನಿಗಳು ಅಡಗಿದರೆ ಸರ್ವಾಧಿಕಾರಕ್ಕೆ ದಾರಿಯಾಗುತ್ತದೆ. ಈ ಜನವಿರೋಧಿ ಮಸೂದೆಗೆ ರಾಜ್ಯಪಾಲರು ಸಹಿ ಮಾಡಬಾರದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷಗಳನ್ನು ಹಣಿಯಲು ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ ಮಂಡಿಸಿ, ತುರ್ತು ಪರಿಸ್ಥಿತಿ ಹೇರಲು ಹೊರಟಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ಟೀಕಿಸಿದ್ದಾರೆ.</p>.<p>‘ದ್ವೇಷ ಭಾಷಣ ವಿಧೇಯಕವು ಪೊಲೀಸ್ ವ್ಯವಸ್ಥೆಯ ದುರುಪಯೋಗಕ್ಕೆ ದಾರಿ ಮಾಡಿಕೊಡಲಿದೆ. ಸಂದೇಶ, ವ್ಯಂಗ್ಯಚಿತ್ರ, ಲೇಖನವು ದ್ವೇಷಕ್ಕೆ ಪ್ರಚೋದನೆ ನೀಡುತ್ತದೆಂದು ನಿರ್ಧರಿಸುವ ಅಧಿಕಾರ ಕೆಳ ಹಂತದ ಪೊಲೀಸ್ ಅಧಿಕಾರಿಗೂ ಇರುತ್ತದೆ’ ಎಂದಿದ್ದಾರೆ.</p>.<p>‘ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಮಾತನಾಡುವ ಹಕ್ಕು ನೀಡಲಾಗಿದೆ. ಸಂವಿಧಾನದ ಪುಸ್ತಕ ಹಿಡಿದು, ಅದರ ರಕ್ಷಕನಂತೆ ಬಿಂಬಿಸಿಕೊಳ್ಳುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರದ್ದೇ ಸರ್ಕಾರ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ’ ಎಂದು ಆರೋಪಿಸಿದ್ದಾರೆ. </p>.<p>‘ದ್ವೇಷ ಭಾಷಣ ನಿಯಂತ್ರಿಸಲು ಈಗಾಗಲೇ ಸಾಕಷ್ಟು ಕಾನೂನುಗಳಿವೆ. ಬಲಿಷ್ಠ ಕಾನೂನುಗಳು ಇದ್ದರೂ, ಕಾಂಗ್ರೆಸ್ ಸರ್ಕಾರ ಹೊಸ ಮತ್ತು ಹೆಚ್ಚು ಕಠಿಣವಾದ ಕಾಯ್ದೆ ಜಾರಿಗೆ ತರಲು ಯತ್ನಿಸುವ ಅವಶ್ಯಕತೆ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ. </p>.<p>‘ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳ ಕರ್ತವ್ಯ. ಪ್ರತಿಭಟನೆ ಸಮಯದಲ್ಲಿ ಆಕ್ರೋಶದ ಮಾತುಗಳು ಬರುವುದು ಸಹಜ. ಇದನ್ನು ರಾಜ್ಯ ಸರ್ಕಾರ ಬಲವಾಗಿ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸರ್ಕಾರದ ನೀತಿ ಟೀಕಿಸುವ ಧ್ವನಿಗಳು ಅಡಗಿದರೆ ಸರ್ವಾಧಿಕಾರಕ್ಕೆ ದಾರಿಯಾಗುತ್ತದೆ. ಈ ಜನವಿರೋಧಿ ಮಸೂದೆಗೆ ರಾಜ್ಯಪಾಲರು ಸಹಿ ಮಾಡಬಾರದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>