ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಬಿಜೆಪಿ ಜೋಳಿಗೆಗೆ ಮತ; ಬದಲಾಗುವುದೇ ಅವಳಿ ನಗರದ ಚಿತ್ರಣ?

ಕೊಟ್ಟ ಮಾತಿನಂತೆ ನಡೆಯುವುದೇ ಬಿಜೆಪಿ...
Last Updated 31 ಡಿಸೆಂಬರ್ 2021, 8:37 IST
ಅಕ್ಷರ ಗಾತ್ರ

ಗದಗ: ಡಿ.27ರಂದು ಗದಗ–ಬೆಟಗೇರಿ ನಗರಸಭೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30ರಂದು ನಡೆದಿದ್ದು, ಬಿಜೆಪಿಗೆ ಸರಳ ಬಹುಮತ ದೊರೆತಿದೆ. ಈ ಮೂಲಕ ದಶಕಗಳ ಬಳಿಕ ಅಧಿಕಾರ ಹಿಡಿದ ಸಂಭ್ರಮದಲ್ಲಿ ಬಿಜೆಪಿ ತೇಲುತ್ತಿದ್ದರೆ; ಹಲವು ಬಾರಿ ನಗರಸಭೆಯಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ಗೆ ಮುಖಭಂಗವಾಗಿದೆ.

ಗದಗ ಬೆಟಗೇರಿ ನಗರಸಭೆಯ ಒಟ್ಟು 35 ವಾರ್ಡ್‌ಗಳ ಪೈಕಿ 18 ವಾರ್ಡ್‌ಗಳಲ್ಲಿ ಬಿಜೆಪಿ ಜಯಗಳಿಸಿದೆ. ಕಳೆದ ಬಾರಿ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ 15 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಪಕ್ಷೇತರರು ಗೆಲುವಿನ ನಗು ತುಳುಕಿಸಿದ್ದಾರೆ.

ಗದಗ–ಬೆಟಗೇರಿ ನಗರಸಭೆ ಚುನಾವಣೆಯನ್ನು ಎರಡೂ ಪಕ್ಷಗಳ ಮುಖಂಡರು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದ್ದರು. ಇದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಕಾಂಗ್ರೆಸ್‌ಗೆ ತೀವ್ರ ನಿರಾಸೆ ಮೂಡಿಸಿದೆ. ನಗರಸಭೆಯಲ್ಲಿ ಸಿಕ್ಕಿರುವ ಗೆಲುವು ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಆಗಲಿದೆ ಎಂದು ಬಿಜೆಪಿ ನಾಯಕರು ವಿಶ್ಲೇಷಣೆ ಮಾಡುತ್ತಿದ್ದಾರೆ.

ಮೋಡಿ ಮಾಡಿದ ಶ್ರೀರಾಮುಲು, ಅನಿಲ ಮೆಣಸಿನಕಾಯಿ ಜೋಡಿ: ಚುನಾವಣೆಗೂ ಮುನ್ನ ಎರಡು ದಿನಗಳ ಕಾಲ ಗದಗ–ಬೆಟಗೇರಿ ನಗರದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದ ಸಚಿವ ಶ್ರೀರಾಮುಲು ಹಾಗೂ ಯುವ ಮುಖಂಡ ಅನಿಲ ಮೆಣಸಿನಕಾಯಿ ಜೋಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಎಸ್‌.ವಿ.ಸಂಕನೂರ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಬಿಜೆಪಿ ನಾಯಕ
ರೆಲ್ಲರ ಸಾಂಘಿಕ ಪ್ರಯತ್ನದಿಂದ ಗದಗ ಬೆಟಗೇರಿ ನಗರಸಭೆ ಬಿಜೆಪಿ ಕೈವಶವಾಗಿದೆ.

ಯುವನಾಯಕ ಅನಿಲ ಮೆಣಸಿನಕಾಯಿ ‘ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಭಿಕ್ಷೆ’ ಎಂಬ ಅಭಿಯಾನ ಆರಂಭಿಸಿ ಕೈಯಲ್ಲಿ ಜೋಳಿಗೆ ಹಿಡಿದು ಅವಳಿ ನಗರದ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದ್ದರು. ಅಧಿಕಾರ ಕೊಟ್ಟರೆ ವಾರ್ಡ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು. ಬಿಜೆಪಿ ನಾಯಕರ ಮಾತು ನಂಬಿ ಮತದಾರರು ಬಿಜೆಪಿ ಜೋಳಿಗೆಗೆ ಮತ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಕೊಟ್ಟ ಮಾತಿನಂತೆ ನಡೆಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT