<p><strong>ಗದಗ</strong>: ‘ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ತಪ್ಪುಗಳು ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ಈ ಪ್ರಕರಣವನ್ನು ಸಿಬಿಐ ಅಥವಾ ಒಬ್ಬರು ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಸತ್ಯ ಹೊರಬರಲಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರದಲ್ಲಿ ಸಾಕಷ್ಟು ಸ್ಕೀಂಗಳು (ಯೋಜನೆ) ಇರುತ್ತವೆ. ಜಮೀನು ಪಡೆದುಕೊಳ್ಳಲು ಬೇರೆ ಬೇರೆ ಸರ್ಕಾರದಲ್ಲಿ ಬೇರೆ ಬೇರೆ ಸ್ಕೀಂಗಳು ಇರುತ್ತವೆ. ಅದನ್ನು ನ್ಯಾಯಸಮ್ಮತವಾಗಿ ಪಡೆದುಕೊಳ್ಳಲು ನಮ್ಮ ತಕರಾರಿಲ್ಲ. ಆದರೆ, ಈ ಪ್ರಕರಣದಲ್ಲಿ ಈ ಯೋಜನೆ ದುರುಪಯೋಗ ಮಾಡಿಕೊಂಡಿರುವ ಅಂಶ ಇದೆ. ಅದನ್ನು ತಮಗೆ ಹೇಗೆ ಬೇಕೋ ಆ ರೀತಿ ಬದಲಾವಣೆ ಮಾಡಿಕೊಳ್ಳಲಾಗಿದೆಯೋ ಇಲ್ಲವೋ ಎಂಬುದು ತನಿಖೆಯಿಂದ ಹೊರಬರಬೇಕಿದೆ’ ಎಂದರು.</p>.<p><strong>ಡೆಂಗಿ ನಿಯಂತ್ರಣದಲ್ಲಿ ವಿಫಲ:</strong></p>.<p>‘ರಾಜ್ಯ ಸರ್ಕಾರ ಡೆಂಗಿ ಜ್ವರ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಡೆಂಗಿ ಜ್ವರ ಕಾಣಿಸಿಕೊಂಡು ಸುಮಾರು ಒಂದು ತಿಂಗಳು ಆಗಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ.ಡೆಂಗಿ ಪ್ರಕರಣಗಳ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 7 ಸಾವಿರ ಪ್ರಕರಣಗಳು ಸಕ್ರಿಯವಾಗಿವೆ. ನಿಜ ಹೇಳಬೇಕೆಂದರೆ ಅದಕ್ಕಿಂತಲೂ ಎರಡುಪಟ್ಟು ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೌಲಭ್ಯಗಳಿಲ್ಲದೇ ಸೋತಿವೆ’ ಎಂದು ಕಿಡಿಕಾರಿದರು.</p>.<p>‘ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಎಲ್ಲ ಜಿಲ್ಲೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ, ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಡೆಂಗಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಚುಚ್ಚುಮದ್ದು ಪೂರೈಕೆ ಮಾಡಬೇಕು. ಬಡವರಿಗೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸುವ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ತಪ್ಪುಗಳು ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ಈ ಪ್ರಕರಣವನ್ನು ಸಿಬಿಐ ಅಥವಾ ಒಬ್ಬರು ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಸತ್ಯ ಹೊರಬರಲಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರದಲ್ಲಿ ಸಾಕಷ್ಟು ಸ್ಕೀಂಗಳು (ಯೋಜನೆ) ಇರುತ್ತವೆ. ಜಮೀನು ಪಡೆದುಕೊಳ್ಳಲು ಬೇರೆ ಬೇರೆ ಸರ್ಕಾರದಲ್ಲಿ ಬೇರೆ ಬೇರೆ ಸ್ಕೀಂಗಳು ಇರುತ್ತವೆ. ಅದನ್ನು ನ್ಯಾಯಸಮ್ಮತವಾಗಿ ಪಡೆದುಕೊಳ್ಳಲು ನಮ್ಮ ತಕರಾರಿಲ್ಲ. ಆದರೆ, ಈ ಪ್ರಕರಣದಲ್ಲಿ ಈ ಯೋಜನೆ ದುರುಪಯೋಗ ಮಾಡಿಕೊಂಡಿರುವ ಅಂಶ ಇದೆ. ಅದನ್ನು ತಮಗೆ ಹೇಗೆ ಬೇಕೋ ಆ ರೀತಿ ಬದಲಾವಣೆ ಮಾಡಿಕೊಳ್ಳಲಾಗಿದೆಯೋ ಇಲ್ಲವೋ ಎಂಬುದು ತನಿಖೆಯಿಂದ ಹೊರಬರಬೇಕಿದೆ’ ಎಂದರು.</p>.<p><strong>ಡೆಂಗಿ ನಿಯಂತ್ರಣದಲ್ಲಿ ವಿಫಲ:</strong></p>.<p>‘ರಾಜ್ಯ ಸರ್ಕಾರ ಡೆಂಗಿ ಜ್ವರ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಡೆಂಗಿ ಜ್ವರ ಕಾಣಿಸಿಕೊಂಡು ಸುಮಾರು ಒಂದು ತಿಂಗಳು ಆಗಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ.ಡೆಂಗಿ ಪ್ರಕರಣಗಳ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 7 ಸಾವಿರ ಪ್ರಕರಣಗಳು ಸಕ್ರಿಯವಾಗಿವೆ. ನಿಜ ಹೇಳಬೇಕೆಂದರೆ ಅದಕ್ಕಿಂತಲೂ ಎರಡುಪಟ್ಟು ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೌಲಭ್ಯಗಳಿಲ್ಲದೇ ಸೋತಿವೆ’ ಎಂದು ಕಿಡಿಕಾರಿದರು.</p>.<p>‘ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಎಲ್ಲ ಜಿಲ್ಲೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ, ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಡೆಂಗಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಚುಚ್ಚುಮದ್ದು ಪೂರೈಕೆ ಮಾಡಬೇಕು. ಬಡವರಿಗೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸುವ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>