<p><strong>ನರಗುಂದ:</strong> ಯೋಗ ನಿಷ್ಠೆಯಿಂದ ಸಮಾಜದಲ್ಲಿ ಸ್ವಾಸ್ಥ್ಯ ನಿರ್ಮಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾಪುರುಷರಲ್ಲಿ ತಾಲ್ಲೂಕಿನ ಭೈರನಹಟ್ಟಿಯ ಲಿಂ.ಬ್ರಹ್ಮಾನಂದ ಪರಮಹಂಸರು ಒಬ್ಬರು. ಅವರ ರಥೋತ್ಸವ ಸೋಮವಾರ ನಡೆಯಲಿದೆ.</p>.<p>ಬ್ರಹ್ಮಾನಂದರು ಮೂಲತಃ ಗುಜರಾತ ಪ್ರಾಂತದ ಶಿವಬಡೋಚಾ ಗ್ರಾಮದ ಗುರುರಾಮ ಪ್ರಸಾದ್ ಹಾಗೂ ದೇವಜಾನಕಿ ದಂಪತಿಯ ಪುತ್ರ. ಬ್ರಹ್ಮಾನಂದ ಪರಮಹಂಸರು ಬಾಲ್ಯದಲ್ಲಿಯೇ ಅನೇಕ ಲೀಲೆ, ಪವಾಡ ತೋರಿ ಸ್ವಗ್ರಾಮದಲ್ಲಿಯೇ ಗುರುತು ಮೂಡಿಸಿದ್ದರು.</p>.<p>ಬಾಲ್ಯದಿಂದಲೆ ಅಧ್ಯಾತ್ಮದತ್ತ ಒಲವು ಹೊಂದಿದ್ದ ಅವರು, ಲೌಕಿಕ ಬದುಕಿನ ಕಷ್ಟ-ಕಾರ್ಪಣ್ಯಗಳಿಂದ ಮುಕ್ತಿ ಬಯಸಿ ಸಂಸಾರ ತ್ಯಜಿಸಿ, ದೇಶ ಸಂಚಾರ ಕೈಗೊಂಡು ಢಾಕೋರ ಪಟ್ಟಣಕ್ಕೆ ಬಂದರು. ಅಲ್ಲಿ ಶ್ರೀಕೃಷ್ಣ ದರ್ಶನ ಪಡೆದು ಗುಮಟಿಯ ಗಂಗಾನದಿಯಲ್ಲಿ ಸ್ನಾನಗೈದು ಬಂದಾಗ ಶ್ರೀಗಳು ಅಲ್ಲಿರುವ ಜನರಿಗೆ ದೈವಿ ಸ್ವರೂಪಿಗಳಾಗಿ ಕಂಡರು.</p>.<p>ಉತ್ತರದ ಕಾಶಿ, ದ್ವಾರಕೆಗಳ ದೇವಸನ್ನಿಧಿಯಲ್ಲಿ ಸೇವೆಗೈದು ಹಿಮಾಲಯದಲ್ಲಿ ತಪೋಗೈದರೆಂದು ಪ್ರತೀತಿ ಇದೆ. ತಪಸ್ವಿಗಳಾದ ಯುವ ಬ್ರಹ್ಮಾನಂದರು ದಕ್ಷಿಣ ಭಾರತದ ಪವಿತ್ರ ಸ್ಥಳಗಳನ್ನೆಲ್ಲ ಸಂದರ್ಶಿಸಿ ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಸೇವೆ ಮಾಡಿ ಯೋಗ <br> ಸಾಧನೆಗೈದರೆಂದು ಕೆಲ ಕೃತಿಗಳಲ್ಲಿ ಉಲ್ಲೇಖವಿದೆ.</p>.<p>ನಂತರ ಬನಶಂಕರಿಗೆ ಬಂದು ಶಾಖಾಂಬರಿ ದೇವಿಯನ್ನು ಸಾಕ್ಷಾತ್ಕರಿಸಿಕೊಂಡು ದೇವಿಯ ಕೈಯಿಂದ ಮೃಷ್ಟಾನ್ನ ಭೋಜನ ಮಾಡಿ ಅಲ್ಲಿರುವ ಪೂಜಾರಿಗಳಿಗೆ ಅಚ್ಚರಿ ಪಡಿಸಿದರು. <br> ಹಾಗೆ ಸಂಚರಿಸುತ್ತ ನರಗುಂದ ತಾಲ್ಲೂಕು ಭೈರನಹಟ್ಟಿ ಗ್ರಾಮಕ್ಕೆ ಬಂದು, ಅಲ್ಲಿ <br> ಭಕ್ತರಿಗೆ ಧರ್ಮಭೋಧನೆ ಮಾಡಿದರು. ಅಲ್ಲಿಂದ ಮುಂದೆ ರಡ್ಡೇರ ನಾಗನೂರ <br> ನಂತರ ಬದಾಮಿ ತಾಲ್ಲೂಕು ಗೋವನಕೊಪ್ಪದಲ್ಲಿಯೂ ಭಕ್ತರನ್ನು ಒಲಿಸುತ್ತ ತಮ್ಮ ಸೇವೆ ಮುಂದುವರಿಸಿದರು.</p>.<p>ಇಂಥಹ ಬ್ರಹ್ಮಾನಂದರ 109ನೇ ಜಾತ್ರಾ ಮಹೋತ್ಸವ ಜೂನ್ 17ರಂದು ಬೈರನಹಟ್ಟಿಯಲ್ಲಿ ಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ರಥೋತ್ಸವದಲ್ಲಿ ಕನ್ನಡದ ಬಾವುಟದ ಜೊತೆಗೆ ಭಾವೈಕ್ಯವನ್ನು ಸಾರುವ ಧ್ವಜವನ್ನು ಕಟ್ಟಿ ನಾಡಿಗೆ ಭಾವೈಕ್ಯದ ಸಂದೇಶ ಸಾರುವುದು ವಿಶೇಷ.</p>.<div><blockquote>ಬ್ರಹ್ಮಾನಂದರು ಸಂಚಾರ ಮಾಡುತ್ತಾ ಬಂದು ಭೈರನಹಟ್ಟಿಯಲ್ಲಿ ಹಲವು ವರ್ಷ ನೆಲೆಸಿದ್ದರು. ಅವರು ಭವರೋಗದ ವೈದ್ಯರಾಗಿದ್ದರು. ಅವರ ಜಾತ್ರೆಯಲ್ಲಿ ಕನ್ನಡ ಬಾವುಟ ಭಾವೈಕ್ಯದ ಧ್ವಜ ಕಟ್ಟಿ ರಥೋತ್ಸವ ಜರುಗಲಿದೆ</blockquote><span class="attribution">ಶಾಂತಲಿಂಗ ಶ್ರೀ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಯೋಗ ನಿಷ್ಠೆಯಿಂದ ಸಮಾಜದಲ್ಲಿ ಸ್ವಾಸ್ಥ್ಯ ನಿರ್ಮಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾಪುರುಷರಲ್ಲಿ ತಾಲ್ಲೂಕಿನ ಭೈರನಹಟ್ಟಿಯ ಲಿಂ.ಬ್ರಹ್ಮಾನಂದ ಪರಮಹಂಸರು ಒಬ್ಬರು. ಅವರ ರಥೋತ್ಸವ ಸೋಮವಾರ ನಡೆಯಲಿದೆ.</p>.<p>ಬ್ರಹ್ಮಾನಂದರು ಮೂಲತಃ ಗುಜರಾತ ಪ್ರಾಂತದ ಶಿವಬಡೋಚಾ ಗ್ರಾಮದ ಗುರುರಾಮ ಪ್ರಸಾದ್ ಹಾಗೂ ದೇವಜಾನಕಿ ದಂಪತಿಯ ಪುತ್ರ. ಬ್ರಹ್ಮಾನಂದ ಪರಮಹಂಸರು ಬಾಲ್ಯದಲ್ಲಿಯೇ ಅನೇಕ ಲೀಲೆ, ಪವಾಡ ತೋರಿ ಸ್ವಗ್ರಾಮದಲ್ಲಿಯೇ ಗುರುತು ಮೂಡಿಸಿದ್ದರು.</p>.<p>ಬಾಲ್ಯದಿಂದಲೆ ಅಧ್ಯಾತ್ಮದತ್ತ ಒಲವು ಹೊಂದಿದ್ದ ಅವರು, ಲೌಕಿಕ ಬದುಕಿನ ಕಷ್ಟ-ಕಾರ್ಪಣ್ಯಗಳಿಂದ ಮುಕ್ತಿ ಬಯಸಿ ಸಂಸಾರ ತ್ಯಜಿಸಿ, ದೇಶ ಸಂಚಾರ ಕೈಗೊಂಡು ಢಾಕೋರ ಪಟ್ಟಣಕ್ಕೆ ಬಂದರು. ಅಲ್ಲಿ ಶ್ರೀಕೃಷ್ಣ ದರ್ಶನ ಪಡೆದು ಗುಮಟಿಯ ಗಂಗಾನದಿಯಲ್ಲಿ ಸ್ನಾನಗೈದು ಬಂದಾಗ ಶ್ರೀಗಳು ಅಲ್ಲಿರುವ ಜನರಿಗೆ ದೈವಿ ಸ್ವರೂಪಿಗಳಾಗಿ ಕಂಡರು.</p>.<p>ಉತ್ತರದ ಕಾಶಿ, ದ್ವಾರಕೆಗಳ ದೇವಸನ್ನಿಧಿಯಲ್ಲಿ ಸೇವೆಗೈದು ಹಿಮಾಲಯದಲ್ಲಿ ತಪೋಗೈದರೆಂದು ಪ್ರತೀತಿ ಇದೆ. ತಪಸ್ವಿಗಳಾದ ಯುವ ಬ್ರಹ್ಮಾನಂದರು ದಕ್ಷಿಣ ಭಾರತದ ಪವಿತ್ರ ಸ್ಥಳಗಳನ್ನೆಲ್ಲ ಸಂದರ್ಶಿಸಿ ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಸೇವೆ ಮಾಡಿ ಯೋಗ <br> ಸಾಧನೆಗೈದರೆಂದು ಕೆಲ ಕೃತಿಗಳಲ್ಲಿ ಉಲ್ಲೇಖವಿದೆ.</p>.<p>ನಂತರ ಬನಶಂಕರಿಗೆ ಬಂದು ಶಾಖಾಂಬರಿ ದೇವಿಯನ್ನು ಸಾಕ್ಷಾತ್ಕರಿಸಿಕೊಂಡು ದೇವಿಯ ಕೈಯಿಂದ ಮೃಷ್ಟಾನ್ನ ಭೋಜನ ಮಾಡಿ ಅಲ್ಲಿರುವ ಪೂಜಾರಿಗಳಿಗೆ ಅಚ್ಚರಿ ಪಡಿಸಿದರು. <br> ಹಾಗೆ ಸಂಚರಿಸುತ್ತ ನರಗುಂದ ತಾಲ್ಲೂಕು ಭೈರನಹಟ್ಟಿ ಗ್ರಾಮಕ್ಕೆ ಬಂದು, ಅಲ್ಲಿ <br> ಭಕ್ತರಿಗೆ ಧರ್ಮಭೋಧನೆ ಮಾಡಿದರು. ಅಲ್ಲಿಂದ ಮುಂದೆ ರಡ್ಡೇರ ನಾಗನೂರ <br> ನಂತರ ಬದಾಮಿ ತಾಲ್ಲೂಕು ಗೋವನಕೊಪ್ಪದಲ್ಲಿಯೂ ಭಕ್ತರನ್ನು ಒಲಿಸುತ್ತ ತಮ್ಮ ಸೇವೆ ಮುಂದುವರಿಸಿದರು.</p>.<p>ಇಂಥಹ ಬ್ರಹ್ಮಾನಂದರ 109ನೇ ಜಾತ್ರಾ ಮಹೋತ್ಸವ ಜೂನ್ 17ರಂದು ಬೈರನಹಟ್ಟಿಯಲ್ಲಿ ಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ರಥೋತ್ಸವದಲ್ಲಿ ಕನ್ನಡದ ಬಾವುಟದ ಜೊತೆಗೆ ಭಾವೈಕ್ಯವನ್ನು ಸಾರುವ ಧ್ವಜವನ್ನು ಕಟ್ಟಿ ನಾಡಿಗೆ ಭಾವೈಕ್ಯದ ಸಂದೇಶ ಸಾರುವುದು ವಿಶೇಷ.</p>.<div><blockquote>ಬ್ರಹ್ಮಾನಂದರು ಸಂಚಾರ ಮಾಡುತ್ತಾ ಬಂದು ಭೈರನಹಟ್ಟಿಯಲ್ಲಿ ಹಲವು ವರ್ಷ ನೆಲೆಸಿದ್ದರು. ಅವರು ಭವರೋಗದ ವೈದ್ಯರಾಗಿದ್ದರು. ಅವರ ಜಾತ್ರೆಯಲ್ಲಿ ಕನ್ನಡ ಬಾವುಟ ಭಾವೈಕ್ಯದ ಧ್ವಜ ಕಟ್ಟಿ ರಥೋತ್ಸವ ಜರುಗಲಿದೆ</blockquote><span class="attribution">ಶಾಂತಲಿಂಗ ಶ್ರೀ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>