ಲಕ್ಷ್ಮೇಶ್ವರ: ಪ್ರತಿ ಬೇಸಿಗೆಯಲ್ಲಿ ಗ್ರಾಮೀಣ ಭಾಗದ ಜನರು ಕೆಲಸ ಅರಸಿ ಊರು ಬಿಟ್ಟು ಬೇರೆ ಬೇರೆ ಊರುಗಳಿಗೆ ಗುಳೆ ಹೋಗುವುದು ಸಾಮಾನ್ಯ. ಆ ಸಮಯದಲ್ಲಿ ವಯೋವೃದ್ಧರು ಮಾತ್ರ ಊರಲ್ಲಿಯೇ ಇರುತ್ತಿದ್ದರು. ಆದರೆ ಗುಳೆ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಅವರ ಊರಲ್ಲಿಯೇ ಕೆಲಸ ಕೊಡಬೇಕು ಎಂಬ ಉದ್ದೇಶದಿಂದ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಲಾಗಿದ್ದು, ಇದು ಗ್ರಾಮೀಣ ಭಾಗದ ಜನತೆಗೆ ನಿಜಕ್ಕೂ ವರದಾನವಾಗಿದೆ.