ನಗರದ ಸೆಂಟ್ ಜೋಸೆಫ್ ಶಾಲೆಯ ಹತ್ತಿರವಿರುವ ಹೆಲ್ತ್ ಕ್ಯಾಂಪ್, ಎಪಿಎಂಸಿ ಆವರಣದಲ್ಲಿರುವ ಮಣ್ಣು ಆರೋಗ್ಯ ಕೇಂದ್ರ, ರೈತ ಸಂಪರ್ಕ ಕೇಂದ್ರ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರ ಜನಸಂಪರ್ಕ ಕಾರ್ಯಾಲಯದ ಆವರಣವೂ ಸೇರಿದಂತೆ ನಗರದ ಹಲವೆಡೆ ಅಳವಡಿಸಿದ್ದ ಪ್ರಚಾರ ಫಲಕಗಳಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಎಂದು ಸಾರುವ ಬ್ಯಾನರ್ಗಳೇ ಈಗಲೂ ಇವೆ. ಇವುಗಳನ್ನು ಬದಲಿಸಲು ಕ್ರಮವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.