ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೇವಲ ರಾಜಕಾರಣ ಮಾಡುವುದಕ್ಕಾಗಿ ಸತ್ಯ ಮರೆಮಾಚಲು ಪ್ರಯತ್ನಿಸಬಾರದು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ನೂನ್ಯತೆಗಳನ್ನು ಸರಿಪಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಆದರೂ, ಕಾಂಗ್ರೆಸ್ ತನ್ನ ಅಸ್ತಿತ್ವ ಇನ್ನೂ ಇದೆ ಎಂದು ತೋರಿಸಿಕೊಳ್ಳಲು ಈ ರೀತಿ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.